ದೊಡ್ಡಬಳ್ಳಾಪುರ: ತೂಬಗೆರೆ ರೆವಿನ್ಯೂ ಇನ್ಸ್ಪೆಕ್ಟರ್ ಲಕ್ಷ್ಮಮ್ಮನವರು ಸಂಬಂಧಿಕರಿಗಾಗಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ, ಹಣ ಇಲ್ಲದೆ ರೈತರ ಕೆಲಸ ಮಾಡಿಕೊಡುತ್ತಿಲ್ಲವೆಂದು ಗ್ರಾಮಸ್ಥರು ಆರೋಪ ಮಾಡಿದ್ದು, ತೂಬಗೆರೆ ರೆವಿನ್ಯೂ ಇನ್ಸ್ಪೆಕ್ಟರ್ ಹುದ್ದೆಯಿಂದ ಲಕ್ಷ್ಮಮ್ಮರನ್ನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸ್ಥಳೀಯ ರೈತರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯ ರೆವಿನ್ಯೂ ಇನ್ಸ್ಪೆಕ್ಟರ್ (ರಾಜಸ್ವ ನಿರೀಕ್ಷಕರು) ಆಗಿ ಲಕ್ಷ್ಮಮ್ಮ.ಆರ್ ಕಳೆದ ನಾಲ್ಕು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ, ಅವರ ನಾಲ್ಕು ವರ್ಷಗಳ ಅವಧಿ ಭ್ರಷ್ಟಾಚಾರದಿಂದ ಕೂಡಿದೆ ಎಂಬುದು ರೈತರ ಆರೋಪವಾಗಿದೆ. ಅಕ್ರಮ ಖಾತೆಗಳನ್ನ ಮಾಡಿರುವುದು, ಸರ್ಕಾರಿ ಸವಲತ್ತುಗಳಾದ ಪಿಂಚಣಿ ಮಾಡಿಕೊಡಲು ಸಹ ಬಡವರಿಂದ ಹಣ ಕೇಳುತ್ತಾರೆ, ಅಕ್ರಮ ಸಕ್ರಮಕ್ಕಾಗಿ ಫಾರಂ ನಂಬರ್ 53 ಅರ್ಜಿ ಹಾಕಿದ ರೈತರಿಂದ ಹಣ ಸುಲಿಗೆ ಮಾಡುತ್ತಿದ್ದಾರೆ, ಭೂಮಿ ಇರುವರಿಗೇ ಗೋಮಾಳ ಜಾಗವನ್ನು ಮಂಜೂರು ಮಾಡಿದ್ದಾರೆಂಬುದು ರೈತರ ಆರೋಪವಾಗಿದೆ.
ಆಡಳಿತಾತ್ಮಕ ಹಿತದೃಷ್ಟಿಯಿಂದ ಲಕ್ಷ್ಮಮ್ಮರನ್ನ ತೂಬಗೆರೆ ರೆವಿನ್ಯೂ ಇನ್ಸ್ಪೆಕ್ಟರ್ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ, ಸರ್ಕಾರದ ಕ್ರಮದಿಂದ ಸ್ಥಳೀಯ ರೈತರು ಸಂತಸಗೊಂಡಿದ್ದರು, ಆದರೆ ಲಕ್ಷ್ಮಮ್ಮ ಮತ್ತೆ ಇದೇ ಹುದ್ದೆಗೆ ಬರಲು ಕೋರ್ಟ್ ಮೂಲಕ ತಡೆ ತಂದಿದ್ದಾರೆ, ಲಕ್ಷ್ಮಮ್ಮ ಮತ್ತೆ ತೂಬಗೆರೆಗೆ ಬರುವುದು ಬೇಡ ಎನ್ನುವುದು ಸ್ಥಳೀಯ ರೈತರ ಬೇಡಿಕೆ, ಲಕ್ಷ್ಮಮ್ಮರನ್ನ ತೂಬಗೆರೆ ಕಚೇರಿಯಿಂದ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಕೊಟ್ಟಿದ್ದಾರೆ, ಇದರ ಜೊತೆಗೆ ಲಕ್ಷ್ಮಮ್ಮರವರು ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದಾಖಲೆಗಳನ್ನ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ರೈತರು.
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…