ದೊಡ್ಡಬಳ್ಳಾಪುರ: ತೂಬಗೆರೆ ರೆವಿನ್ಯೂ ಇನ್ಸ್ಪೆಕ್ಟರ್ ಲಕ್ಷ್ಮಮ್ಮನವರು ಸಂಬಂಧಿಕರಿಗಾಗಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ, ಹಣ ಇಲ್ಲದೆ ರೈತರ ಕೆಲಸ ಮಾಡಿಕೊಡುತ್ತಿಲ್ಲವೆಂದು ಗ್ರಾಮಸ್ಥರು ಆರೋಪ ಮಾಡಿದ್ದು, ತೂಬಗೆರೆ ರೆವಿನ್ಯೂ ಇನ್ಸ್ಪೆಕ್ಟರ್ ಹುದ್ದೆಯಿಂದ ಲಕ್ಷ್ಮಮ್ಮರನ್ನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸ್ಥಳೀಯ ರೈತರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯ ರೆವಿನ್ಯೂ ಇನ್ಸ್ಪೆಕ್ಟರ್ (ರಾಜಸ್ವ ನಿರೀಕ್ಷಕರು) ಆಗಿ ಲಕ್ಷ್ಮಮ್ಮ.ಆರ್ ಕಳೆದ ನಾಲ್ಕು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ, ಅವರ ನಾಲ್ಕು ವರ್ಷಗಳ ಅವಧಿ ಭ್ರಷ್ಟಾಚಾರದಿಂದ ಕೂಡಿದೆ ಎಂಬುದು ರೈತರ ಆರೋಪವಾಗಿದೆ. ಅಕ್ರಮ ಖಾತೆಗಳನ್ನ ಮಾಡಿರುವುದು, ಸರ್ಕಾರಿ ಸವಲತ್ತುಗಳಾದ ಪಿಂಚಣಿ ಮಾಡಿಕೊಡಲು ಸಹ ಬಡವರಿಂದ ಹಣ ಕೇಳುತ್ತಾರೆ, ಅಕ್ರಮ ಸಕ್ರಮಕ್ಕಾಗಿ ಫಾರಂ ನಂಬರ್ 53 ಅರ್ಜಿ ಹಾಕಿದ ರೈತರಿಂದ ಹಣ ಸುಲಿಗೆ ಮಾಡುತ್ತಿದ್ದಾರೆ, ಭೂಮಿ ಇರುವರಿಗೇ ಗೋಮಾಳ ಜಾಗವನ್ನು ಮಂಜೂರು ಮಾಡಿದ್ದಾರೆಂಬುದು ರೈತರ ಆರೋಪವಾಗಿದೆ.
ಆಡಳಿತಾತ್ಮಕ ಹಿತದೃಷ್ಟಿಯಿಂದ ಲಕ್ಷ್ಮಮ್ಮರನ್ನ ತೂಬಗೆರೆ ರೆವಿನ್ಯೂ ಇನ್ಸ್ಪೆಕ್ಟರ್ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ, ಸರ್ಕಾರದ ಕ್ರಮದಿಂದ ಸ್ಥಳೀಯ ರೈತರು ಸಂತಸಗೊಂಡಿದ್ದರು, ಆದರೆ ಲಕ್ಷ್ಮಮ್ಮ ಮತ್ತೆ ಇದೇ ಹುದ್ದೆಗೆ ಬರಲು ಕೋರ್ಟ್ ಮೂಲಕ ತಡೆ ತಂದಿದ್ದಾರೆ, ಲಕ್ಷ್ಮಮ್ಮ ಮತ್ತೆ ತೂಬಗೆರೆಗೆ ಬರುವುದು ಬೇಡ ಎನ್ನುವುದು ಸ್ಥಳೀಯ ರೈತರ ಬೇಡಿಕೆ, ಲಕ್ಷ್ಮಮ್ಮರನ್ನ ತೂಬಗೆರೆ ಕಚೇರಿಯಿಂದ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಕೊಟ್ಟಿದ್ದಾರೆ, ಇದರ ಜೊತೆಗೆ ಲಕ್ಷ್ಮಮ್ಮರವರು ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದಾಖಲೆಗಳನ್ನ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ರೈತರು.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…