RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುವುದು ದೇಶದ್ರೋಹವಲ್ಲದೇ ಮತ್ತೇನು..? ಎಂದು ಸಿಪಿಐ(ಎಂ) ಜಿಲ್ಲಾ ಮುಖಂಡ ಚಂದ್ರತೇಜಸ್ವಿ ಅವರು ಪ್ರಶ್ನೆ ಮಾಡಿದರು.

ನಗರದ ತಾಲ್ಲೂಕು ಕಚೇರಿ ಮುಂದೆ ಭೀಮ ಸಂಘಟನೆಗಳ ಮಹಾ ಒಕ್ಕೂಟ ಹಾಗೂ ಸಂವಿಧಾನ ರಕ್ಷಣೆಗಾಗಿ ನಾಗರೀಕರ ವೇದಿಕೆ ವತಿಯಿಂದ ನಡೆದ, ನಕಲಿ ದೇಶಭಕ್ತ ಅರ್ ಎಸ್ ಎಸ್ ನೋಂದಣಿಗಾಗಿ ಒತ್ತಾಯಿಸಿ ಮತ್ತು ಕೋಮುವಾದಿ ರಾಜಕಾರಣವನ್ನು ವಿರೋಧಿಸಿ ನಡೆದ ಬೃಹತ್‌ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಗತ್ತಿನ 38 ರಾಷ್ಟ್ರಗಳಲ್ಲಿ ಸಂಪರ್ಕ ಹೊಂದಿರುವ ಸಂಘ ಪರಿವಾರ 2240 ಅಂಗಸಂಸ್ಥೆಗಳನ್ನು ಹೊಂದಿದೆ. ಆದರೆ, ಅದರ ಕಾರ್ಯ ಚಟುವಟಿಕೆ ತುಂಬಾ ನಿಗೂಢವಾಗಿದೆ. ಇಡೀ ದೇಶದಲ್ಲಿ ಕೋಮು ವಿಭಜನೆ, ಅಲ್ಪಸಂಖ್ಯಾತರು ಮತ್ತು ಚರ್ಚುಗಳ ಮೇಲೆ‌ ದಾಳಿ, ದಲಿತರು ಮಹಿಳೆಯರ ಮೇಲಿನ ಶೋಷಣೆಗೆ ಈ ಸಂಘಟನೆಯ ಬೆಂಬವಿದೆ ಎಂದು ಆರೋಪಿಸಿದರು.

ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗುವ ಮುನ್ನ 40 ಸಾವಿರದಷ್ಟಿದ್ದ ಶಾಖೆಗಳ ಸಂಖ್ಯೆ ಕಳೆದ 12 ವರ್ಷಗಳಲ್ಲಿ 88 ಸಾವಿರಕ್ಕೆ ಏರಿಕೆಯಾಗಿವೆ. ಕಳೆದ ಹತ್ತು ವರ್ಷಗಳಲ್ಲಿ ಹೊರ ದೇಶದಲ್ಲೇ 2,300 ಕೋಟಿ ಹಣ ಸಂಗ್ರಹವಾಗಿದೆ. ಈ ಹಣವನ್ನು ಬೇರೆ ಬೇರೆ ಮೂಲಗಳಲ್ಲಿ ಅಕ್ರಮವಾಗಿ ನಮ್ಮ ದೇಶಕ್ಕೆ ಹಣ ಸಾಗಣೆ ಮಾಡುತ್ತಿದ್ದಾರೆ. ಇದಕ್ಕೆ ಯಾವುದೇ ಲೆಕ್ಕಪತ್ರಗಳನ್ನು ಇಟ್ಟಿಲ್ಲ. ಸರ್ಕಾರಕ್ಕೆ ಲೆಕ್ಕ ಕೊಡುವುದಿಲ್ಲ‌ ಆದ್ದರಿಂದ ಈ ಕೂಡಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಈ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಬೇಕು ಎಂದು ಆಗ್ರಹಿಸಿದರು.

ಪ್ರಜಾವಿಮೋಚನಾ ಚಳವಳಿ ಸಂಘಟನೆಯ ರಾಜ್ಯಾಧ್ಯಕ್ಷ ಮುನಿ ಆಂಜಿನಪ್ಪ ಮಾತನಾಡಿ, ಕಳೆದ 12 ವರ್ಷಗಳಿಂದಲೂ ದೇಶದಲ್ಲಿ ಕೋಮುವಾದಿ ರಾಜಕೀಯ ರಾರಾಜಿಸುತ್ತಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಪರೋಕ್ಷವಾಗಿ ಬಿ.ಜೆ.ಪಿಯ ಮೂಲಕ ಮನುವಾದಿ ಮನಸ್ಥಿತಿಯಂತೆ ಕೇವಲ
ಸುಳ್ಳುಗಳಿಂದ ಕೂಡಿದ ಮತ್ತು ದೇವರು-ಧರ್ಮದ ಹೆಸರಿನಲ್ಲಿ ನಡೆಸುತ್ತಿದೆ. ಈ ಹೀನ ರಾಜಕೀಯ ವ್ಯವಸ್ಥೆಯಿಂದಾಗಿ 76 ವರ್ಷಗಳ ಇತಿಹಾಸವುಳ್ಳ ಭಾರತದ ಸಂವಿಧಾನದ ಮೇಲೆ ತೀವ್ರತರ ದುಷ್ಪರಿಣಾಮ ಉಂಟಾಗುತ್ತಿದೆ ಎಂಬ ಭಾವನೆ ದೇಶದ ಜನಮಾನಸದಲ್ಲಿ ಬೆರೆತು ಎನ್ ಡಿಎ ಸರ್ವಾಧಿಕಾರಿಯ ಆಡಳಿತವನ್ನು ಭವ್ಯ ಭಾರತದ ಏಕತೆ ಮತ್ತು ಪರಂಪರೆ, ದೇಶವು ನಡೆದು ಬಂದ ದಾರಿಯನ್ನು ಜನತೆ ಪದೇಪದೇ ಅವಲೋಕಿಸುತ್ತಿರುವುದು ಸುಳ್ಳಾಗಿ ಉಳಿದಿಲ್ಲ ಎಂದರು.

ಅರ್ ಎಸ್ ಎಸ್ ನ ನೆರಳಿನಲ್ಲಿ ಬಿಜೆಪಿ ನಡೆಸುತ್ತಿರುವ ಕೋಮುವಾದದ ದುರಾಡಳಿತವನ್ನು ನಾಡಿನ ಜನತೆ ನಿತ್ಯವೂ ಲೆಕ್ಕ ಹಾಕುವಂತಾಗಿದೆ. ನೂರು ವರ್ಷಗಳು ತುಂಬಿದೆಯೆಂದು ಶತಮಾನದ ಸಂಭ್ರಮಾಚರಣೆಯಲ್ಲಿ ಬೀಗುವ ಅರ್ ಎಸ್ ಎಸ್ ಸಂಚಾಲಕರಾದ ಮೋಹನ್ ಭಾಗವತ್‌ ರಿಗೆ ವಾರ್ಷಿಕ 54 ರಿಂದ 55 ಕೋಟಿ ರೂಪಾಯಿಗಳ ತೆರಿಗೆದಾರನ ಹಣವನ್ನು ರಕ್ಷಣೆಗಾಗಿ ವೆಚ್ಚ ಮಾಡಲಾಗುತ್ತಿದೆ. ದೇಶದ ಸಂವಿಧಾನದ ಪ್ರಕಾರ ಕಾನೂನು ಪಾಲಿಸಿ ಸಂಘವನ್ನು ನೊಂದಾಯಿಸಿಕೊಳ್ಳಬೇಕೆಂದು ಕರ್ನಾಟಕ ರಾಜ್ಯದ ಗೃಹಮಂತ್ರಿಗಳಾದ ಪ್ರಿಯಾಂಕ್ ಖರ್ಗೆರವರು ಒತ್ತಾಯಿಸಿದ್ದೇ ಪ್ರಮಾದವಾಗಿಬಿಟ್ಟಿದೆ. ಮಂತ್ರಿಗಳ ವಿರುದ್ಧ ಸಂಘ ಪರಿವಾರದವರು ಮನಸ್ಸಿಗೆ ಬಂದಂತೆ ವಿಷ ಕಾರುತ್ತಾ, ಹೀಯಾಳಿಸಿ ನಿತ್ಯವೂ ಬೈಗುಳದ ಸುರಿಮಳೆಗೈಯ್ಯುತ್ತಿರುವುದು ನಾಗರೀಕ ಸಮಾಜ ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯದಿಲ್ಲ. ದೇಶವು ಪರಿಕೀಯರಿಂದ ಸ್ವಾತಂತ್ರ್ಯ ಪಡೆಯಲು ಹನಿರಕ್ತ ನೀಡದೇ ದೂರ ಉಳಿದ ಮನುವಾದಿಗಳು ಮನುಧರ್ಮವನ್ನು ದೇಶದಲ್ಲಿ ಮತ್ತೊಮ್ಮೆ ಜಾರಿಗೊಳಿಸಲು ಹವಣಿಸುತ್ತಿರುವ ಸಂಘ ಪರಿವಾರದ ಕೋಮುವಾದಿ ರಾಜಕಾರಣ ದೇಶದ ಜನತೆಯಲ್ಲಿ ಆತಂಕ ಮೂಡಿಸಿದೆ. ಆದ್ದರಿಂದ ರಾಷ್ಟ್ರಪತಿಗಳು ಇಂತಹ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ನಕಲಿ ದೇಶಭಕ್ತರ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಸಂವಿಧಾನಬದ್ಧ ಆಶಯದಂತೆ ಕಾನೂನುಬದ್ಧ ನೊಂದಣಿಗಾಗಿ ಒತ್ತಾಯಿಸಲು ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದರು.

ಸಂಘಪರಿವಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಉಪವಿಭಾಗಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ವೆಂಕಟರಮಣಪ್ಪ, ಕರ್ನಾಟಕ ಜನಾಂದೋಲನ ಸಂಘಟನೆಯ ರಾಜ್ಯಾಧ್ಯಕ್ಷ ಕೆ.ಮರಿಯಪ್ಪ. ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎ.ವೆಂಕಟೇಶ್, ಪ್ರಜಾವಿಮೋಚನಾ ಸಮಿತಿ ಸ್ವಾಭಿಮಾನ ಸಂಘನೆಯ ರಾಜ್ಯ ಕಾರ್ಯಾಧ್ಯಕ್ಷ ಗೂಳ್ಯಹನುಮಣ್ಣ, ಸಂವಿಧಾನ ರಕ್ಷಣೆಗಾಗಿ ನಾಗರೀಕರ ವೇದಿಕೆ ಸಂಚಾಲಕ ರಾಜುಸಣ್ಣಕ್ಕಿ ಮುಂತಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರೈತರು ಒಂದು ವರ್ಷದಲ್ಲಿ 5 ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ- ಪಿಡಿಒ ರಮೇಶ್

ಚಿಕ್ಕನಾಯಕನಹಳ್ಳಿ: ರೈತರು ಒಂದು ವರ್ಷದಲ್ಲಿ 5 ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ,  ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ…

1 hour ago

ಹಣದ ಹರಿವು

ಹೊರಹೋಗುವ ಸುಲಭ ದಾರಿಗಳು, ಒಳಬರುವ ಕಠಿಣ ಹಾದಿಗಳು....... ಖರ್ಚು ಮಾಡುವ ಸುಲಭ ಮಾರ್ಗಗಳು, ಸಂಪಾದನೆ ಮಾಡಲು ಕಠಿಣ ಹಾದಿಗಳು...... ಆಧುನಿಕತೆ…

3 hours ago

ಸೆ.6ರಂದು ದೊಡ್ಡಬಳ್ಳಾಪುರದ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 220/66/11 ಕೆ.ವಿ. ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6ರಂದು ದೊಡ್ಡಬಳ್ಳಾಪುರ…

20 hours ago

ದೌರ್ಬಲ್ಯ – ಶೋಷಣೆ – ಸ್ವಾಭಿಮಾನ……

ಈ ಸಮಾಜ ಯಾವಾಗಲೂ ಬಹುತೇಕ ದುರ್ಬಲರ ಮೇಲೆ ಸವಾರಿ ಮಾಡುತ್ತದೆ. ಅದರಲ್ಲೂ ಈ ಹಣ ಕೇಂದ್ರೀಕೃತ ಆಧುನಿಕ ಸಮಾಜದಲ್ಲಿ ದುರ್ಬಲರೇ…

1 day ago

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

3 days ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

3 days ago