ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ನಡೆದಿರುವ, ದೌರ್ಜನ್ಯ ಪ್ರಕರಣಗಳು ಸೇರಿದಂತೆ ಇನ್ನಿತರ ಪ್ರಕರಣಗಳನ್ನು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಶೀಘ್ರವಾಗಿ ಪರಿಶೀಲಿಸಿ, ನಿಯಮಾನುಸಾರ ಕ್ರಮ ಕೈಗೊಂಡು, ಇತ್ಯರ್ಥಪಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ತಿಳಿಸಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ 1ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಲ್ಲೂಕುಗಳಲ್ಲಿ ನಿಗದಿತ ಸಮಯಕ್ಕೆ ನಿಯಮಿತವಾಗಿ ಜಾಗೃತಿ ಹಾಗೂ ಉಸ್ತುವಾರಿ ಸಮಿತಿಯ ಸಭೆಗಳನ್ನು ನಡೆಸುವುದರಿಂದ ಹಲವಾರು ದೌರ್ಜನ್ಯದಂತಹ ಸಮಸ್ಯೆಗಳನ್ನು ತಳಮಟ್ಟದಲ್ಲಿಯೇ ಪರಿಹರಿಸಬಹುದು, ಜಿಲ್ಲಾ ಮಟ್ಟದಲ್ಲಿ ಚರ್ಚಿಸುವ ಅಗತ್ಯವಿರುವುದಿಲ್ಲ ಎಂದು ಜಿಲ್ಲಾ ಜಾಗೃತಿ ಸಮಿತಿ ಸದಸ್ಯರುಗಳು ಸಭೆಯಲ್ಲಿ ತಿಳಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆ ಕಾರ್ಯಕ್ರಮಗಳ ಅಡಿಯಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಸೌಲಭ್ಯಗಳನ್ನು ತಲುಪಿಸಿ ಮಾರ್ಚ್ ಅಂತ್ಯದೊಳಗೆ ಶೇಕಡಾ ನೂರರಷ್ಟು ಭೌತಿಕ, ಆರ್ಥಿಕ ಪ್ರಗತಿ ಸಾಧಿಸಬೇಕು ಎಂದು ಹೇಳಿದರು.
2022ರ ಡಿಸೆಂಬರ್ ಮಾಹೆಯಿಂದ 2023ರ ಮಾರ್ಚ್ ಮಾಹೆಯವರೆಗೆ ಒಟ್ಟು 32 ಜನ ಸಂತ್ರಸ್ತರಿಗೆ ರೂ. 10.35 ಲಕ್ಷ ರೂ.ಗಳ ಪರಿಹಾರಧನವನ್ನು ಮಂಜೂರು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಸಭೆಯಲ್ಲಿ ತಿಳಿಸಿದರು.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…