SC-ST ಹೆಸರಲ್ಲಿ ಅನ್ಯ ಸಮುದಾಯದವರಿಗೆ ನಕಲಿ ಜಾತಿ ಪ್ರಮಾಣ ಪತ್ರ: ಇದರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿದ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ

ಸಮಾವೇಶ, ಜಾತ್ರಾ ಮಹೋತ್ಸವ, ಹಬ್ಬ-ಹರಿದಿನಗಳನ್ನು ಆಚರಣೆ ಮಾಡುವುದು ನಮ್ಮಲ್ಲಿರುವ ಒಗ್ಗಟ್ಟನ್ನು ಪ್ರದರ್ಶಿಸಲು. ರಾಜ್ಯದಲ್ಲಿ ವಾಲ್ಮೀಕಿ ಸಮಾಜದ ಒಗ್ಗಟ್ಟು ಬಲಿಷ್ಠವಾಗಿದೆ. ನಮ್ಮ ಬಲಿಷ್ಠತೆಯನ್ನು ಪ್ರದರ್ಶನ ಮಾಡಲು ವಾಲ್ಮೀಕಿ ಜಾತ್ರಾ ಮಹೋತ್ಸವ ಕಾರ್ಯಕ್ರಮವನ್ನು ಫೆ.8 ಮತ್ತು 9ರಂದು ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಆಯೋಜನೆ ಮಾಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಎಲ್ಲರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ತಿಳಿಸಿದರು.

ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾ ಸ್ವಾಮೀಜಿಯವರು ದೊಡ್ಡಬಳ್ಳಾಪುರದಲ್ಲಿ ತಾಲ್ಲೂಕು ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆ 2024 ಪೂರ್ವಭಾವಿ ಸಭೆ ಹಾಗೂ ತಾಲ್ಲೂಕು ಮಟ್ಟದ ಜನಜಾಗೃತಿ ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ ಆಶೀರ್ವಚನ ನೀಡಿ ಮಾತನಾಡಿದ ಅವರು, ಈಗಾಗಲೇ ಐದು ಜಾತ್ರೆಗಳು ಯಶಸ್ವಿಯಾಗಿ ನಡೆದಿವೆ. ಇದೀಗ ಆರನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಸಮುದಾಯದ ಮುಂದಿರುವ ಹತ್ತು ಹಲವು ಬೇಡಿಕೆಗಳನ್ನು ಸರ್ಕಾರಕ್ಕೆ ಆಗ್ರಹ ಮಾಡುವ ಮೂಲಕ ಸಮುದಾಯದ ಆಶೋತ್ತರಗಳನ್ನು ಈಡೇರಿಸುವ ಬೃಹತ್ ಜನಜಾಗೃತಿಗಾಗಿ ಜಾತ್ರಾ ಮಹೋತ್ಸವವೇ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವ. ಜಾತ್ರಾ ಮಹೋತ್ಸವದಲ್ಲಿ ವಿಚಾರ ಗೋಷ್ಠಿಗಳು, ನಾಡಿನ ಹಾಗೂ ಸಮುದಾಯದ ಇತಿಹಾಸ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಬೃಹತ್ ಜನಜಾಗೃತಿ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ‌ ಹೆಸರಲ್ಲಿ ಅನ್ಯ ಸಮುದಾಯದವರು ನಕಲಿ ಜಾತಿ ಪ್ರಮಾಣ ಪತ್ರವನ್ನ ಪಡೆದುಕೊಂಡು ನಿಜವಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ‌ದವರ ಸವಲತ್ತುಗಳನ್ನು ಕಸಿದುಕೊಳ್ಳುತ್ತಿದ್ದಾರೆ. ಈ ಕುರಿತು ಸರ್ಕಾರ ಗಮನಕ್ಕೆ ತರಲಾಗಿದ್ದು, ಈಗಾಗಲೇ ನಕಲಿ ಜಾತಿ ಪ್ರಮಾಣ ಪತ್ರ ನೀಡಿದಂತಹ 175 ತಹಶಿಲ್ದಾರ್ ಗಳ ಮೇಲೆ ಸುಮೋಟೋ ಕೇಸ್ ದಾಖಲಿಸಿ ಎಫ್ ಐಆರ್ ಮಾಡಲಾಗಿದೆ. ಪರಿಶಿಷ್ಟರ ಹೆಸರಲ್ಲಿ ಜಾತಿ ಪ್ರಮಾಣ ಪತ್ರಗಳನ್ನು ಸವರ್ಣಿಯರು ಪಡೆದು ಶೋಷಿತ ಸಮುದಾಯವನ್ನು ಅವಕಾಶಗಳಿಂದ ವಂಚಿಸುವುದು ಸರಿಯಲ್ಲ. ಇದರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು, ಇಲ್ಲದಿದ್ದರೆ ಹೋರಾಟ ಮಾಡಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಸಿದರು.

ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯುವ ರಾಮ ಪ್ರತಿಷ್ಠಾಪನ ಕಾರ್ಯಕ್ರಮ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸ್ವಾಮೀಜಿ, ಜನವರಿ 22ರಂದು ಹಲವು ಮಠಗಳ ಶ್ರೀಗಳ ಸಂಗಡ ತಾವು ಆಯೋಧ್ಯೆಗೆ ತೆರಳಿ ರಾಮ ಪ್ರತಿಷ್ಠಾಪನ ಕಾರ್ಯಕ್ರಮದಲ್ಲಿ  ಭಾಗವಹಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ, ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಎಸ್ ಟಿ ಸಮಿತಿಯ ರಾಜ್ಯಾಧ್ಯಕ್ಷ ಮುನಿರಾಜು(ಚಿಕ್ಕಪ್ಪಿ) ಅವರನ್ನು ತಾಲ್ಲೂಕು ಜಾತ್ರಾ ಸಮಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

ವಾಲ್ಮೀಕಿ ಸಮಾಜದ ಮುಖಂಡ ಮುನಿರಾಜು (ಚಿಕ್ಕಪ್ಪಿ)  ಮಾತನಾಡಿ, ನಮ್ಮ ಸಮಾಜದ ಪ್ರಮುಖರು ಪೂಜ್ಯರು ಆದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಜಾತ್ರಾ ಮಹೋತ್ಸವದ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಜವಾಬ್ದಾರಿಯನ್ನು ವಹಿಸಿದ್ದಾರೆ. ಅವರ ವಿಶ್ವಾಸಕ್ಕೆ ಬದ್ಧನಾಗಿ ನಮ್ಮ ಸಮುದಾಯದ ಮುಖಂಡರು ಹಾಗೂ ಸಂಗಡಿಗರ ಸಹಕಾರದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಯಾಗೊಳಿಸಲು ಶ್ರಮಿಸುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಾಲ್ಮೀಕಿ ಸಂಘದ ತಾಲೂಕು ಅಧ್ಯಕ್ಷ ಪ್ರೇಮ್ ಕುಮಾರ್, ಕೇಬಲ್ ರಾಮಚಂದ್ರ, ಹಿರಿಯ ಹೋರಾಟಗಾರ ಸಂಜೀವ್ ನಾಯಕ, ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕರ ಯುವಪಡೆ ರಾಜ್ಯಾಧ್ಯಕ್ಷ ಸುಬ್ರಮಣಿ, ಕುಮಾರ್, ರಾಜಣ್ಣ, ಅಂಬರೀಶ್, ರಘು, ನವೀನ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿರಿದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

2 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

7 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago