SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಗಂಭೀರವಾಗಿ ಕೆಲಸ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.

ದೇವನಹಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಅವರು, “SIR ಮತ್ತು GBA ಚುನಾವಣೆ ಕುರಿತು ಎಲ್ಲರಿಗೂ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ವಿಧಾನಸಭಾ ಕ್ಷೇತ್ರಗಳಲ್ಲಿ SIR ಮ್ಯಾಪಿಂಗ್ ಪ್ರಕ್ರಿಯೆ ಹೇಗೆ ನಡೆಯುತ್ತಿದೆ ಎಂಬುದನ್ನು ಪರಿಶೀಲಿಸಬೇಕು” ಎಂದು ಹೇಳಿದರು.

ಪಕ್ಷದ ಕಾರ್ಯಕರ್ತರ ಸಭೆಗಳನ್ನು ನಡೆಸಿ ಪ್ರತಿಯೊಬ್ಬ ಮತದಾರರ ಮತವನ್ನು ಉಳಿಸುವ ಕೆಲಸ ಮಾಡಬೇಕಿದೆ. ಮತದಾರರ ದಾಖಲಾತಿಗಳನ್ನು ಸಂಗ್ರಹಿಸಿ ಒದಗಿಸುವ ಜವಾಬ್ದಾರಿಯನ್ನು ಪಕ್ಷದ ಮುಖಂಡರು ಹೊತ್ತುಕೊಳ್ಳಬೇಕು ಎಂದು ತಿಳಿಸಿದರು.

ಬಿಎಲ್ಒಗಳು ಯಾವುದೇ ಪಕ್ಷಪಾತ ಅಥವಾ ದ್ವೇಷದ ಮನೋಭಾವವಿಲ್ಲದೆ ಸಹಕಾರ ನೀಡಬೇಕು. ರಾಜಕೀಯ ಪಕ್ಷಗಳಿಗೆ ಬಿಎಲ್ಒಗಳು ತರಬೇತಿ ನೀಡುತ್ತಿದ್ದು, ಕಾಂಗ್ರೆಸ್ ಪಕ್ಷವೂ ತನ್ನ ಕಾರ್ಯಕರ್ತರಿಗೆ ವಿಶೇಷ ಕಾರ್ಯಾಗಾರಗಳನ್ನು ಆಯೋಜಿಸಲಿದೆ ಎಂದು ಹೇಳಿದರು.

“ಎಲ್ಲ ಸಚಿವರು ಹಾಗೂ ಶಾಸಕರು ಬೇರೆ ಕೆಲಸಗಳನ್ನು ಬಿಟ್ಟು ಈ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಈಗಾಗಲೇ ಸೂಚನೆ ನೀಡಿದ್ದೇನೆ” ಎಂದು ಡಿಸಿಎಂ ಹೇಳಿದರು.

ಸಭೆಗೆ ಗೈರಾಗಿದ್ದ ಪದಾಧಿಕಾರಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಯನ್ನೂ ನೀಡಿದ ಅವರು, “ಇಂದು ಸಭೆಗೆ ಹಾಜರಾಗದ ಪದಾಧಿಕಾರಿಗಳನ್ನು ಹುದ್ದೆಯಿಂದ ತೆಗೆದುಹಾಕಲು ಹೈಕಮಾಂಡ್ ಸೂಚಿಸಿದೆ. ಪಕ್ಷ ಸಂಘಟನೆಯಲ್ಲಿ ಆಸಕ್ತಿ ತೋರದವರನ್ನು ಪಕ್ಷದಿಂದಲೇ ದೂರ ಮಾಡಲಾಗುವುದು” ಎಂದು ಸ್ಪಷ್ಟಪಡಿಸಿದರು.

SIR ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ವ್ಯಾಪಕವಾಗಿ ಕೈಗೊಳ್ಳಲಾಗುವುದು ಎಂದೂ ಹೇಳಿದರು.

ಇದೇ ವೇಳೆ ದೆಹಲಿಗೆ ತೆರಳುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, “ಹೋಗಲೇ ಬೇಕಲ್ವಪ್ಪ, ಹೋಗ್ತಿದ್ದೀನಿ” ಎಂದು ಹಾಸ್ಯಚಟಾಕಿ ಉತ್ತರ ನೀಡಿದರು. ಅವರು ಸಂಜೆ ವಿಶೇಷ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

3 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

4 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

17 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

17 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

17 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

18 hours ago