ಕೊಡಗು ಜಿಲ್ಲೆಯ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿದ್ದ ಓರ್ವ ವಿದ್ಯಾರ್ಥಿನಿ ತೇರ್ಗಡೆಯಾಗಿದ್ದಾಳೆ. ಶೇ.100 ಫಲಿತಾಂಶ ಪಡೆದಿದ್ದಳು. ಆದರೆ ಇದೀಗ ಅವಳ ಕಗ್ಗೊಲೆ ಆಗಿದೆ. ತಲೆ ಕತ್ತರಿಸಿ ದೇಹವನ್ನು ಬಿಸಾಡಿ ಹೋಗಿರುವ ದುಷ್ಕರ್ಮಿ.
ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿ 2023-24 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಶಾಲೆಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಯು.ಎಸ್.ಮೀನಾ ತೇರ್ಗಡೆ ಹೊಂದಿದ ಪರಿಣಾಮ ಶಾಲೆಗೆ ಶೇ.100 ಫಲಿತಾಂಶ ಲಭಿಸಿದ್ದು, ಗ್ರಾಮದಲ್ಲಿ ಸಂತೋಷಕ್ಕೆ ಕಾರಣ ಆಗಿತ್ತು.
ಸೂರ್ಲಬ್ಬಿ ಶಾಲೆಯಲ್ಲಿ ಏಕೈಕ ವಿದ್ಯಾರ್ಥಿನಿ ಮೀನ ಮಾತ್ರ ಕಲಿಯುತ್ತಿದ್ದಳು. ಏಕೈಕ ವಿದ್ಯಾರ್ಥಿಯನ್ನು ಹೊಂದಿದ್ದ ಈ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೀನಾ ತೇರ್ಗಡೆಯಾಗಿರುವುದು ಶಿಕ್ಷಣ ಇಲಾಖೆಗೆ ಪುಷ್ಠಿ ನೀಡಿದೆ ಎಂದು ಸಂಭ್ರಮ ಪಡುತ್ತಿರುವಾಗಲೆ ಇದೀಗ ಆಕೆಯ ಹತ್ಯೆ ನಡೆದಿದೆ.
ಆಕೆಯ ಪ್ರಿಯಕರನಿಂದಲೇ ಈ ಹತ್ಯೆ ನಡೆದಿದೆ ಎಂದು ಹಲವರು ಶಂಕೆವ್ಯಕ್ತಪಡಿಸುತ್ತಿದ್ದಾರೆ, ಇನ್ನಷ್ಟೇ ಪೊಲೀಸ್ ತನಿಖೆಯಿಂದ ಸತ್ಯಾ ಸತ್ಯತೆ ಹೊರ ಬರಬೇಕಾಗಿದೆ.
ಅಪ್ರಾಪ್ತ ಬಾಲಕಿ ಹತ್ಯೆ ಬಗೆ ಕೊಡಗು ಪೊಲೀಸ್ ಬಿರುಸಿನ ತನಿಖೆ ಕೈಗೊಂಡಿದ್ದಾರೆ.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…