ಕೊಡಗು ಜಿಲ್ಲೆಯ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿದ್ದ ಓರ್ವ ವಿದ್ಯಾರ್ಥಿನಿ ತೇರ್ಗಡೆಯಾಗಿದ್ದಾಳೆ. ಶೇ.100 ಫಲಿತಾಂಶ ಪಡೆದಿದ್ದಳು. ಆದರೆ ಇದೀಗ ಅವಳ ಕಗ್ಗೊಲೆ ಆಗಿದೆ. ತಲೆ ಕತ್ತರಿಸಿ ದೇಹವನ್ನು ಬಿಸಾಡಿ ಹೋಗಿರುವ ದುಷ್ಕರ್ಮಿ.
ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿ 2023-24 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಶಾಲೆಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಯು.ಎಸ್.ಮೀನಾ ತೇರ್ಗಡೆ ಹೊಂದಿದ ಪರಿಣಾಮ ಶಾಲೆಗೆ ಶೇ.100 ಫಲಿತಾಂಶ ಲಭಿಸಿದ್ದು, ಗ್ರಾಮದಲ್ಲಿ ಸಂತೋಷಕ್ಕೆ ಕಾರಣ ಆಗಿತ್ತು.
ಸೂರ್ಲಬ್ಬಿ ಶಾಲೆಯಲ್ಲಿ ಏಕೈಕ ವಿದ್ಯಾರ್ಥಿನಿ ಮೀನ ಮಾತ್ರ ಕಲಿಯುತ್ತಿದ್ದಳು. ಏಕೈಕ ವಿದ್ಯಾರ್ಥಿಯನ್ನು ಹೊಂದಿದ್ದ ಈ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೀನಾ ತೇರ್ಗಡೆಯಾಗಿರುವುದು ಶಿಕ್ಷಣ ಇಲಾಖೆಗೆ ಪುಷ್ಠಿ ನೀಡಿದೆ ಎಂದು ಸಂಭ್ರಮ ಪಡುತ್ತಿರುವಾಗಲೆ ಇದೀಗ ಆಕೆಯ ಹತ್ಯೆ ನಡೆದಿದೆ.
ಆಕೆಯ ಪ್ರಿಯಕರನಿಂದಲೇ ಈ ಹತ್ಯೆ ನಡೆದಿದೆ ಎಂದು ಹಲವರು ಶಂಕೆವ್ಯಕ್ತಪಡಿಸುತ್ತಿದ್ದಾರೆ, ಇನ್ನಷ್ಟೇ ಪೊಲೀಸ್ ತನಿಖೆಯಿಂದ ಸತ್ಯಾ ಸತ್ಯತೆ ಹೊರ ಬರಬೇಕಾಗಿದೆ.
ಅಪ್ರಾಪ್ತ ಬಾಲಕಿ ಹತ್ಯೆ ಬಗೆ ಕೊಡಗು ಪೊಲೀಸ್ ಬಿರುಸಿನ ತನಿಖೆ ಕೈಗೊಂಡಿದ್ದಾರೆ.
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…