ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ.
7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು ಪಾಸಾಗಿದ್ದಾರೆ. 7.70.209 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು..
ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ
ಉಡುಪಿ ದ್ವಿತೀಯ ಸ್ಥಾನ
ಉತ್ತರ ಕನ್ನಡ ತೃತೀಯ ಸ್ಥಾನ
ಕಲಬುರಗಿ ಜಿಲ್ಲೆ ಕೊನೆ ಸ್ಥಾನದಲ್ಲಿದೆ..
ಶೇ. 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ
ಫಲಿತಾಂಶವನ್ನು https://karresults.nic.in ಲಿಂಕ್ ಮೂಲಕ ಹಾಗೂ KarnatakaOne Mobile App ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಸ್ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುವುದು.
ಈ ವರ್ಷ ಪ್ರಥಮ ಬಾರಿಗೆ ವಿಶೇಷವಾಗಿ, ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು (Marks Card) ಡಿಜಿಲಾಕರ್ (Digilocker) ಮೂಲಕ ಏ.:23ರಂದು ಮಧ್ಯಾಹ್ನ 12ಕ್ಕೆ ಲಭ್ಯಗೊಳಿಸಲಾಗುವುದು. https://www.digilocker.gov.in ಅನ್ನು ಬಳಸಿ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಅಂಕಪಟ್ಟಿಯನ್ನು ಡಿಜಿಲಾಕರ್ ನಿಂದ ಡೌನ್ಲೋಡ್ ಮಾಡಿಕೊಳ್ಳವ ಪ್ರಕ್ರಿಯೆಯನ್ನು ಈ Video link https://tinyurl.com/mw84wmh9 ನ್ನು ಬಳಸಿ ತಿಳಿದುಕೊಳ್ಳಬಹುದು. ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಶಾಲೆಗಳಿಗೆ ದಿನಾಂಕ: 23-04-2026 ರಂದು ಮಧ್ಯಾಹ್ನ 12.00 ಗಂಟೆಗೆ ಲಭ್ಯಗೊಳಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ…
ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಅತ್ಯುತ್ತಮ ಸಾಧನೆ ತೋರಿದ್ದು, ಕಲಬುರಗಿ ಜಿಲ್ಲೆ ಕಡಿಮೆ ಪಾಸ್ ಪ್ರಮಾಣ ದಾಖಲಿಸಿದೆ. ಬೆಂಗಳೂರು ನಗರ ಹಾಗೂ ಮೈಸೂರು ಜಿಲ್ಲೆಗಳು ರಾಜ್ಯ ಸರಾಸರಿಗಿಂತ ಉತ್ತಮ ಸಾಧನೆ ತೋರಿವೆ.
ಟಾಪರ್ಗಳ ಹೆಸರುಗಳು ಮತ್ತು ಸಾಧನೆ
ರೂಪಾ ಚನಗೌಡ ಪಾಟೀಲ (ಬೆಳಗಾವಿ) – 625/625
ಜಾನವಿ (ಹಾಸನ) – 625/625
ಉತ್ಸವ ಪಾಟೀಲ (ಹಾಸನ) 625/625
ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ 90% ಕ್ಕಿಂತ ಹೆಚ್ಚು ಪಾಸ್ ಪ್ರಮಾಣ ಸಾಧಿಸಿದ್ದು, ಉಡುಪಿ 88%, ಬೆಂಗಳೂರು ನಗರ 82%, ಮೈಸೂರು 80%, ಬೆಳಗಾವಿ 78%, ಶಿವಮೊಗ್ಗ 76%, ತುಮಕೂರು 74%, ಕೋಲಾರ 72%, ಚಿತ್ರದುರ್ಗ 70% ಹಾಗೂ ಕಲಬುರಗಿ 65% ಪಾಸ್ ಪ್ರಮಾಣ ದಾಖಲಿಸಿದೆ.
ರಾಜ್ಯ ಮಟ್ಟದ ಟಾಪರ್ಗಳ ಪಟ್ಟಿಯಲ್ಲಿ ರೂಪಾ ಚನಗೌಡ ಪಾಟೀಲ (ಬೆಳಗಾವಿ), ಜಾನವಿ (ಹಾಸನ) ಹಾಗೂ ಉತ್ಸವ ಪಾಟೀಲ (ಹಾಸನ) ಪೂರ್ಣ 625/625 ಅಂಕಗಳನ್ನು ಪಡೆದು ಸ್ಥಾನ ಪಡೆದಿದ್ದಾರೆ. ಇತರ ಜಿಲ್ಲೆಗಳಲ್ಲಿಯೂ ಹಲವಾರು ವಿದ್ಯಾರ್ಥಿಗಳು ಪೂರ್ಣ ಅಂಕಗಳನ್ನು ಪಡೆದು ರಾಜ್ಯ ಮಟ್ಟದ ಟಾಪರ್ಗಳ ಪಟ್ಟಿಯಲ್ಲಿ ಸೇರಿದ್ದಾರೆ.
ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳು ಮೇ 2026ರಲ್ಲಿ ನಡೆಯಲಿದ್ದು, ಶಾಲೆಗಳ ಮೂಲಕ ಮೂಲ ಮಾರ್ಕ್ಶೀಟ್ ವಿತರಿಸಲಾಗುತ್ತದೆ. DigiLocker ಮೂಲಕ ಡಿಜಿಟಲ್ ಮಾರ್ಕ್ಶೀಟ್ ಕೂಡ ಲಭ್ಯವಿದೆ.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…
ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…