SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಮೂವರು‌ ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ.

7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು ಪಾಸಾಗಿದ್ದಾರೆ. 7.70.209 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು..

ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ

ಉಡುಪಿ ದ್ವಿತೀಯ ಸ್ಥಾನ

ಉತ್ತರ ಕನ್ನಡ ತೃತೀಯ ಸ್ಥಾನ

ಕಲಬುರಗಿ ಜಿಲ್ಲೆ ಕೊನೆ ಸ್ಥಾನದಲ್ಲಿದೆ..

ಶೇ. 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ

ಫಲಿತಾಂಶವನ್ನು https://karresults.nic.in ಲಿಂಕ್ ಮೂಲಕ ಹಾಗೂ KarnatakaOne Mobile App ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಸ್‌ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುವುದು.

ಈ ವರ್ಷ ಪ್ರಥಮ ಬಾರಿಗೆ ವಿಶೇಷವಾಗಿ, ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು (Marks Card) ಡಿಜಿಲಾಕರ್ (Digilocker) ಮೂಲಕ ಏ.:23ರಂದು ಮಧ್ಯಾಹ್ನ 12ಕ್ಕೆ ಲಭ್ಯಗೊಳಿಸಲಾಗುವುದು. https://www.digilocker.gov.in ಅನ್ನು ಬಳಸಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಅಂಕಪಟ್ಟಿಯನ್ನು ಡಿಜಿಲಾಕರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳವ ಪ್ರಕ್ರಿಯೆಯನ್ನು ಈ Video link https://tinyurl.com/mw84wmh9 ನ್ನು ಬಳಸಿ ತಿಳಿದುಕೊಳ್ಳಬಹುದು. ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಶಾಲೆಗಳಿಗೆ ದಿನಾಂಕ: 23-04-2026 ರಂದು ಮಧ್ಯಾಹ್ನ 12.00 ಗಂಟೆಗೆ ಲಭ್ಯಗೊಳಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ…

ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಅತ್ಯುತ್ತಮ ಸಾಧನೆ ತೋರಿದ್ದು, ಕಲಬುರಗಿ ಜಿಲ್ಲೆ ಕಡಿಮೆ ಪಾಸ್ ಪ್ರಮಾಣ ದಾಖಲಿಸಿದೆ. ಬೆಂಗಳೂರು ನಗರ ಹಾಗೂ ಮೈಸೂರು ಜಿಲ್ಲೆಗಳು ರಾಜ್ಯ ಸರಾಸರಿಗಿಂತ ಉತ್ತಮ ಸಾಧನೆ ತೋರಿವೆ.

ಟಾಪರ್‌ಗಳ ಹೆಸರುಗಳು ಮತ್ತು ಸಾಧನೆ

ರೂಪಾ ಚನಗೌಡ ಪಾಟೀಲ (ಬೆಳಗಾವಿ) – 625/625

ಜಾನವಿ (ಹಾಸನ) – 625/625

ಉತ್ಸವ ಪಾಟೀಲ (ಹಾಸನ) 625/625

ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ 90% ಕ್ಕಿಂತ ಹೆಚ್ಚು ಪಾಸ್ ಪ್ರಮಾಣ ಸಾಧಿಸಿದ್ದು, ಉಡುಪಿ 88%, ಬೆಂಗಳೂರು ನಗರ 82%, ಮೈಸೂರು 80%, ಬೆಳಗಾವಿ 78%, ಶಿವಮೊಗ್ಗ 76%, ತುಮಕೂರು 74%, ಕೋಲಾರ 72%, ಚಿತ್ರದುರ್ಗ 70% ಹಾಗೂ ಕಲಬುರಗಿ 65% ಪಾಸ್ ಪ್ರಮಾಣ ದಾಖಲಿಸಿದೆ.

ರಾಜ್ಯ ಮಟ್ಟದ ಟಾಪರ್‌ಗಳ ಪಟ್ಟಿಯಲ್ಲಿ ರೂಪಾ ಚನಗೌಡ ಪಾಟೀಲ (ಬೆಳಗಾವಿ), ಜಾನವಿ (ಹಾಸನ) ಹಾಗೂ ಉತ್ಸವ ಪಾಟೀಲ (ಹಾಸನ) ಪೂರ್ಣ 625/625 ಅಂಕಗಳನ್ನು ಪಡೆದು ಸ್ಥಾನ ಪಡೆದಿದ್ದಾರೆ. ಇತರ ಜಿಲ್ಲೆಗಳಲ್ಲಿಯೂ ಹಲವಾರು ವಿದ್ಯಾರ್ಥಿಗಳು ಪೂರ್ಣ ಅಂಕಗಳನ್ನು ಪಡೆದು ರಾಜ್ಯ ಮಟ್ಟದ ಟಾಪರ್‌ಗಳ ಪಟ್ಟಿಯಲ್ಲಿ ಸೇರಿದ್ದಾರೆ.

ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳು ಮೇ 2026ರಲ್ಲಿ ನಡೆಯಲಿದ್ದು, ಶಾಲೆಗಳ ಮೂಲಕ ಮೂಲ ಮಾರ್ಕ್‌ಶೀಟ್ ವಿತರಿಸಲಾಗುತ್ತದೆ. DigiLocker ಮೂಲಕ ಡಿಜಿಟಲ್ ಮಾರ್ಕ್‌ಶೀಟ್ ಕೂಡ ಲಭ್ಯವಿದೆ.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

9 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

15 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

21 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

22 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago