SSLC ಹಾಗೂ PUC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ: ವೇಳಾಪಟ್ಟಿ ಇಲ್ಲಿದೆ…ನೋಡಿ

2026ನೇ ಸಾಲಿನ ಎಸ್​ಎಸ್​ಎಲ್​​ಸಿ ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ಮತ್ತು ಪರೀಕ್ಷೆ-2 ರ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಬುಧವಾರ ಬಿಡುಗಡೆ ಮಾಡಿದೆ.

ದ್ವಿತೀಯ ಪಿಯು ಪರೀಕ್ಷೆ ಫೆಬ್ರುವರಿ 28ರಿಂದ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್‌ 18ರಿಂದ ಆರಂಭವಾಗಲಿದೆ.

ದ್ವಿತೀಯ ಪಿಯು ಪರೀಕ್ಷೆ ಮಾರ್ಚ್‌ 17ಕ್ಕೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಏ.2ಕ್ಕೆ ಮುಕ್ತಾಯವಾಗಲಿದೆ.

ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ:

ಫೆ.28: ಕನ್ನಡ, ಅರೇಬಿಕ್‌

ಮಾರ್ಚ್‌ 2: ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ ಮನಃಶಾಸ್ತ್ರ

ಮಾ.3: ಇಂಗ್ಲಿಷ್‌

ಮಾ.4: ತೆಲುಗು, ತಮಿಳು, ಮರಾಠಿ, ಉರ್ದು, ಸಂಸ್ಕೃತ ಫ್ರೆಂಚ್‌, ಮಲಯಾಳಂ

ಮಾ.5: ಇತಿಹಾಸ

ಮಾ.6: ಭೌತ ವಿಜ್ಞಾನ

ಮಾ.7: ಐಚ್ಛಿಕ ಕನ್ನಡ, ಭೂಗರ್ಭ ಶಾಸ್ತ್ರ, ವ್ಯವಹಾರ ಅಧ್ಯಯನ

ಮಾ.9: ರಸಾಯನ ವಿಜ್ಞಾನ, ಶಿಕ್ಷಣಶಾಸ್ತ್ರ, ಮೂಲಗಣಿತ

ಮಾ.10: ಅರ್ಥಶಾಸ್ತ್ರ

ಮಾ.11: ತರ್ಕಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗೃಹ ವಿಜ್ಞಾನ

ಮಾ.12: ಹಿಂದಿ

ಮಾ.13: ರಾಜ್ಯಶಾಸ್ತ್ರ

ಮಾ.14: ಲೆಕ್ಕಶಾಸ್ತ್ರ, ಗಣಿತ

ಮಾ.16: ಸಮಾಜ ಶಾಸ್ತ್ರ, ಜೀವ ವಿಜ್ಞಾನ, ಗಣಕ ವಿಜ್ಞಾನ

ಮಾ.17: ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ ರೀಟೇಲ್‌, ಆಟೊಮೊಬೈಲ್‌, ಹೆಲ್ತ್‌ಕೇರ್, ಬ್ಯೂಟಿ ಆ್ಯಂಡ್‌ ವೆಲ್‌ನೆಸ್‌.

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ:

ಮಾರ್ಚ್‌ 18: ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್‌ (ಎನ್‌ಸಿಇಆರ್‌ಟಿ), ಸಂಸ್ಕೃತ

ಮಾ.23: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ, ಕರ್ನಾಟಕ ಸಂಗೀತ

ಮಾ.25: ದ್ವಿತೀಯ ಭಾಷೆಗಳಾದ ಇಂಗ್ಲಿಷ್‌, ಕನ್ನಡ

ಮಾ.28: ಗಣಿತ, ಸಮಾಜ ಶಾಸ್ತ್ರ

ಮಾ.30: ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್‌, ಅರೇಬಿಕ್‌, ಪರ್ಷಿಯನ್‌, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಎನ್‌ಎಸ್‌ಕ್ಯೂಎಫ್‌ ವಿಷಯಗಳು

ಏ.1: ಅರ್ಥಶಾಸ್ತ್ರ, ಎಂಜಿನಿಯರಿಂಗ್‌ ವಿಷಯಗಳು

ಏ.2: ಸಮಾಜ ವಿಜ್ಞಾನ

Ramesh Babu

Journalist

Recent Posts

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶ ಅಸಂಬದ್ಧ: ಸುಪ್ರೀಂಕೋರ್ಟ್‌ ಮೆಟ್ಟಿಲೇರಲು ಸರ್ಕಾರದ ಚಿಂತನೆ – ಸಚಿವ ಚಲುವರಾಯಸ್ವಾಮಿ

ತಮಿಳುನಾಡಿಗೆ ನಿತ್ಯ 6 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವಂತೆ CWRC ನೀಡಿರುವ ಆದೇಶ ಅಸಂಬದ್ಧವಾಗಿದ್ದು, ಅತ್ಯಂತ ನೋವು ಹಾಗೂ…

33 minutes ago

ಮೋರಿ ಬಳಿ ತ್ಯಾಜ್ಯ ರಾಶಿ; ದುರ್ವಾಸನೆ, ಸೊಳ್ಳೆ ಕಾಟಕ್ಕೆ ವಿನಾಯಕನಗರ ನಿವಾಸಿಗಳ ಪರದಾಟ

ದೊಡ್ಡಬಳ್ಳಾಪುರ: ನಗರದ ವಿನಾಯಕನಗರದ ಸರ್ಕಾರಿ ಪ್ರಾಥಮಿಕ ಶಾಲೆ ಸಮೀಪದಲ್ಲಿರುವ ರಾಜಕಾಲುವೆಗೆ ಅಡ್ಡಲಾಗಿ ನಿರ್ಮಿಸಿರುವ ಮೋರಿ ಬಳಿ ತ್ಯಾಜ್ಯ ರಾಶಿ ಬಿದ್ದಿದ್ದು,…

3 hours ago

ನೀರಾವರಿ ಯೋಜನೆಗಳ ಕಾಮಗಾರಿ ವಿಳಂಬ ಸಹಿಸುವುದಿಲ್ಲ- ಸಚಿವ ಎನ್ ಚಲುವರಾಯಸ್ವಾಮಿ

ರಾಜ್ಯದ ನೀರಾವರಿ ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ರೈತರಿಗೆ ಯೋಜನೆಗಳ ಸಂಪೂರ್ಣ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಬದ್ಧತೆಯಿಂದ…

7 hours ago

ಇಂದು (ಸೆ.8) ದೊಡ್ಡಬಳ್ಳಾಪುರದ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರ ವ್ಯಾಪ್ತಿಯಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 8ರಂದು ನಗರದ ಹಲವು ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ…

7 hours ago

ಶ್ರಾವಣ ಮಾಸದ ಕೊನೆಯ ಸೋಮವಾರ: ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಹೂವಿನ ಆರತಿ ಸೇವೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಶೇಷ ಪೂಜೆ…

20 hours ago

ಅಗ್ನಿ ಅವಘಡದ ವೇಳೆ ತುರ್ತು ಕ್ರಮಗಳ ಕುರಿತು ಅಣಕು ಪ್ರದರ್ಶನ: ಯುವ ಆಪ್ತಮಿತ್ರ ತರಬೇತಿ ಶಿಬಿರದಲ್ಲಿ ರೋವರ್ಸ್–ರೇಂಜರ್ಸ್‌ಗೆ ಜಾಗೃತಿ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…

22 hours ago