T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ ಗೆಲುವು ಸಾಧಿಸಿ ಇತಿಹಾಸ ನಿರ್ಮಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಎದುರಾಳಿ ತಂಡಕ್ಕೆ 256 ರನ್ ಗಳ ಅತ್ಯಧಿಕ ರನ್ ಟಾರ್ಗೆಟ್ ನೀಡಿತ್ತು. ಭಾರತದ ಪರ ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಪರಿಣಾಮ ಭಾರತ ಬೃಹತ್ ಮೊತ್ತ ಗಳಿಸಲು ಸಾಧ್ಯವಾಯಿತು.

ಬೃಹತ್ ರನ್ ಚೇಸಿಂಗ್ ಗೆ ಇಳಿದ ನ್ಯೂಜಿಲ್ಯಾಂಡ್ ತಂಡ 100 ರನ್ ಗಳನ್ನು ಗಳಿಸುವ ಮುನ್ನವೇ ಪ್ರಮುಖ ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿತು.

ಅಂತಿಮವಾಗಿ ಭಾರತದ ಎದುರು ನ್ಯೂಜಿಲ್ಯಾಂಡ್ ಇನ್ನೂ ಒಂದು ಓವರ್ ಬಾಕಿ ಇರುವಾಗಲೇ 159 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲೊಪ್ಪಿಕೊಂಡಿತು.

ನ್ಯೂಜಿಲೆಂಡ್ ತಂಡವನ್ನು ಮಣಿಸಿ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತ ತಂಡ ಸುಮಾರು 20.4 ಕೋಟಿ ರೂಪಾಯಿಯಷ್ಟು ಬೃಹತ್ ಮೊತ್ತವನ್ನು ಬಹುಮಾನವಾಗಿ ಪಡೆದಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಈ ಬಾರಿಯ ಟಿ20 ವಿಶ್ವಕಪ್‌ಗಾಗಿ ದಾಖಲೆ ಮಟ್ಟದ ಒಟ್ಟು ಬಹುಮಾನದ ಮೊತ್ತವನ್ನು ಘೋಷಿಸಿದೆ.

ಈ ಬಾರಿಯ ಟೂರ್ನಿಗಾಗಿ ಐಸಿಸಿ ಒಟ್ಟು 11.25 ಮಿಲಿಯನ್ ಅಮೆರಿಕನ್ ಡಾಲರ್ (ಅಂದಾಜು 93.5 ಕೋಟಿ ರೂಪಾಯಿ) ಮೊತ್ತವನ್ನು ಬಹುಮಾನಕ್ಕಾಗಿ ಮೀಸಲಿಟ್ಟಿತ್ತು. ಕ್ರಿಕೆಟ್ ಇತಿಹಾಸದಲ್ಲೇ ಟಿ20 ವಿಶ್ವಕಪ್‌ಗೆ ನೀಡಲಾದ ಅತಿ ದೊಡ್ಡ ಬಹುಮಾನದ ಮೊತ್ತ ಇದಾಗಿದೆ. ಪ್ರತಿಯೊಂದು ಪಂದ್ಯದ ಗೆಲುವಿಗೂ ಸುಮಾರು 25 ಲಕ್ಷ ರೂಪಾಯಿಗಳ ಬೋನಸ್ ನೀಡಲಾಗಿದ್ದು, ಇದು ಈ ಟೂರ್ನಿಯಲ್ಲಿ ಅಚ್ಚರಿಯ ಫಲಿತಾಂಶ ನೀಡಿದ ಸಣ್ಣ ತಂಡಗಳಿಗೂ ಆರ್ಥಿಕವಾಗಿ ಸಹಾಯವಾಗಿದೆ.

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

16 hours ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

1 day ago

ತಮಿಳುನಾಡಿನ ಮಹಿಳೆಯರಿಗೆ ಬಂಪರ್‌ ಕೊಡುಗೆ ಘೋಷಿಸಿ ಹೆಣ್ಮಕ್ಕಳ ಕಣ್ಮಣಿಯಾಗಲು ಹೊರಟ ನಟ, ಟಿವಿಕೆ ಪಕ್ಷದ ಅಧ್ಯಕ್ಷ ವಿಜಯ್

ನಟಿ ತ್ರಿಷಾ ಜತೆ ಅಫೇರ್‌ ಆರೋಪ, ಹೆಂಡ್ತಿ ಡಿವೋರ್ಸ್‌ ಗೆ ಅರ್ಜಿ ವಿಚಾರ, ವಿಪಕ್ಷಗಳ ಟೀಕಾ ಪ್ರಹಾರ, ಸೋಷಿಯಲ್‌ ಮೀಡಿಯಾದಲ್ಲಿ…

1 day ago

ಮಾರ್ಚ್ – 8 ವಿಶ್ವ ಮಹಿಳಾ ದಿನ

ವಿಶ್ವ ಮಹಿಳಾ ದಿನ, ಮಾರ್ಚ್ - 8.......... ಹೆಣ್ಣಿಗೆ ಜಗತ್ತಿನಲ್ಲಿಯೇ ಅತ್ಯಂತ ಪೂಜನೀಯ ಸ್ಥಾನ ನೀಡಿರುವ ಭಾರತೀಯ ಸಂಸ್ಕೃತಿಯ ಮತ್ತೊಂದು…

1 day ago

ಸಚಿವ ಕೆ.ಎಚ್ ಮುನಿಯಪ್ಪ ಸಿಎಂ ಆಗಲಿ-ಆರ್. ವಿ ಮಹೇಶ್ ಕುಮಾರ್

ಕೇಂದ್ರ ಮಾಜಿ ಸಚಿವರು, ಹಾಲಿ ರಾಜ್ಯ ಆಹಾರ ಸಚಿವರಾದ ಕೆಎಚ್ ಮುನಿಯಪ್ಪ ಅವರು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯಾಗಲಿ ಎಂಬುದು ನಮ್ಮ…

2 days ago

ಬೆಂ,ಗ್ರಾ ಜಿಲ್ಲಾ ಯೋಜನಾ ಸಮಿತಿ ಸದಸ್ಯರ ಚುನಾವಣೆ: 10 ಸ್ಥಾನ ಗೆದ್ದ ಬಿಜೆಪಿ ಮತ್ತು ಜೆಡಿಎಸ್‌ನ ಮೈತ್ರಿ ಸದಸ್ಯರು: ಶಾಸಕ ಧೀರಜ್ ಮುನಿರಾಜ್ ಅವರು ಅಭಿನಂದನೆ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಯೋಜನಾ ಸಮಿತಿ ಸದಸ್ಯರ ಚುನಾವಣೆಯಲ್ಲಿ 10 ಸ್ಥಾನಗಳಲ್ಲೂ ಜಯಭೇರಿ ಭಾರಿಸಿದ ಬಿಜೆಪಿ ಮತ್ತು ಜೆಡಿಎಸ್‌ನ ಮೈತ್ರಿ…

2 days ago