TAPMCS Election : ಶ್ರೀನಿವಾಸ್ ಮೂರ್ತಿ ಯಾವ ಪಕ್ಷದ ಅಭ್ಯರ್ಥಿ…?: ಕಾಂಗ್ರೆಸ್ ಮತ್ತು NDA ಕೂಟದ ಎರಡು ಕರಪತ್ರಗಳಲ್ಲಿ ಕಾಣಿಸಿಕೊಂಡ ಅಭ್ಯರ್ಥಿ: ಮತದಾರರಲ್ಲಿ ಗೊಂದಲ

ದೊಡ್ಡಬಳ್ಳಾಪುರ : ಶ್ರೀನಿವಾಸ್ ಮೂರ್ತಿ ಯಾವ ಪಕ್ಷದ ಅಭ್ಯರ್ಥಿ ಎಂಬುದೇ ಗೊಂದಲಮಾಯವಾಗಿದೆ. ಸ್ಥಳೀಯವಾಗಿ, ನವೆಂಬರ್ 2ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲೂಕು ವ್ಯವಸಾಯೋತ್ಪನ್ನ ಸಹಕಾರಿ ಸಂಘದ ಚುನಾವಣೆಯ ‘ಎ’ ತರಗತಿ ಸ್ಥಾನದ ಅಭ್ಯರ್ಥಿ ಶ್ರೀನಿವಾಸ್ ಮೂರ್ತಿ.ಬಿ.ಎನ್ ಕಾಂಗ್ರೆಸ್ ಬೆಂಬಲಿತ ಮತ್ತು ಎನ್ ಡಿಎ ಕೂಟದ ಎರಡು ಕರಪತ್ರಗಳಲ್ಲಿ ಕಾಣಿಸಿಕೊಂಡಿರುವುದು ಮತದಾರರ ಗೊಂದಲಕ್ಕೆ ಕಾರಣವಾಗಿದೆ.

‘ಎ’ ತರಗತಿ ಸ್ಥಾನದ ಅಭ್ಯರ್ಥಿ ಶ್ರೀನಿವಾಸ್ ಮೂರ್ತಿ ಪರವಾಗಿ ಕಾಂಗ್ರೆಸ್ ಒಂದೆಡೆ ಪ್ರಚಾರ ಮಾಡಿದರೆ ಮತ್ತೊಂದೆಡೆ ಎನ್ ಡಿ ಎ ( ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ) ಪ್ರಚಾರ ಮಾಡುತ್ತಿದ್ದೆ. ಎರಡು ಪಕ್ಷಗಳು ಮತಯಾಚನೆ ಕರಪತ್ರದಲ್ಲಿ ತಮ್ಮ ಬೆಂಬಲಿತ ಅಭ್ಯರ್ಥಿಗಳ ಪಟ್ಟಿಯಲ್ಲಿ ಮುದ್ರಿಸಿದ್ದು, ಎರಡು ಕರಪತ್ರಗಳಲ್ಲಿ ಗಂಟಿಗಾನಹಳ್ಳಿ ‘ಎ’ ತರಗತಿ ಸ್ಥಾನದ ಅಭ್ಯರ್ಥಿ ಶ್ರೀನಿವಾಸ್ ಮೂರ್ತಿ ಬಿ.ಎನ್ ಭಾವಚಿತ್ರವಿರುವುದು ಮತದಾರರಲ್ಲಿ ಗೊಂದಲ ಮೂಡಿಸಿದೆ. ಇದೆಂತಾ ಸರ್ವ ಪಕ್ಷಗಳ ಮೈತ್ರಿ ಎನ್ನುವ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಶ್ರೀನಿವಾಸಮೂರ್ತಿ.ಬಿ.ಎಸ್ ನಾನು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಕಣದಲ್ಲಿ ಇದ್ದೇನೆ. ಅದರೆ ಎನ್ ಡಿಎ ಕೂಟದ ಕರಪತ್ರದಲ್ಲಿ ನನ್ನ ಹೆಸರಿರುವುದು ನನಗೆ ಗೊತ್ತಿಲ್ಲ, ನನ್ನ ಗಮನಕ್ಕೆ ತರದೆ ಕರಪತ್ರದಲ್ಲಿ ನನ್ನ ಹೆಸರು ಹಾಕಿಕೊಂಡಿದ್ದಾರೆ ಎಂದರು.

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

3 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

3 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

6 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

14 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

16 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago