ದೊಡ್ಡಬಳ್ಳಾಪುರ : ಶ್ರೀನಿವಾಸ್ ಮೂರ್ತಿ ಯಾವ ಪಕ್ಷದ ಅಭ್ಯರ್ಥಿ ಎಂಬುದೇ ಗೊಂದಲಮಾಯವಾಗಿದೆ. ಸ್ಥಳೀಯವಾಗಿ, ನವೆಂಬರ್ 2ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲೂಕು ವ್ಯವಸಾಯೋತ್ಪನ್ನ ಸಹಕಾರಿ ಸಂಘದ ಚುನಾವಣೆಯ ‘ಎ’ ತರಗತಿ ಸ್ಥಾನದ ಅಭ್ಯರ್ಥಿ ಶ್ರೀನಿವಾಸ್ ಮೂರ್ತಿ.ಬಿ.ಎನ್ ಕಾಂಗ್ರೆಸ್ ಬೆಂಬಲಿತ ಮತ್ತು ಎನ್ ಡಿಎ ಕೂಟದ ಎರಡು ಕರಪತ್ರಗಳಲ್ಲಿ ಕಾಣಿಸಿಕೊಂಡಿರುವುದು ಮತದಾರರ ಗೊಂದಲಕ್ಕೆ ಕಾರಣವಾಗಿದೆ.
‘ಎ’ ತರಗತಿ ಸ್ಥಾನದ ಅಭ್ಯರ್ಥಿ ಶ್ರೀನಿವಾಸ್ ಮೂರ್ತಿ ಪರವಾಗಿ ಕಾಂಗ್ರೆಸ್ ಒಂದೆಡೆ ಪ್ರಚಾರ ಮಾಡಿದರೆ ಮತ್ತೊಂದೆಡೆ ಎನ್ ಡಿ ಎ ( ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ) ಪ್ರಚಾರ ಮಾಡುತ್ತಿದ್ದೆ. ಎರಡು ಪಕ್ಷಗಳು ಮತಯಾಚನೆ ಕರಪತ್ರದಲ್ಲಿ ತಮ್ಮ ಬೆಂಬಲಿತ ಅಭ್ಯರ್ಥಿಗಳ ಪಟ್ಟಿಯಲ್ಲಿ ಮುದ್ರಿಸಿದ್ದು, ಎರಡು ಕರಪತ್ರಗಳಲ್ಲಿ ಗಂಟಿಗಾನಹಳ್ಳಿ ‘ಎ’ ತರಗತಿ ಸ್ಥಾನದ ಅಭ್ಯರ್ಥಿ ಶ್ರೀನಿವಾಸ್ ಮೂರ್ತಿ ಬಿ.ಎನ್ ಭಾವಚಿತ್ರವಿರುವುದು ಮತದಾರರಲ್ಲಿ ಗೊಂದಲ ಮೂಡಿಸಿದೆ. ಇದೆಂತಾ ಸರ್ವ ಪಕ್ಷಗಳ ಮೈತ್ರಿ ಎನ್ನುವ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಶ್ರೀನಿವಾಸಮೂರ್ತಿ.ಬಿ.ಎಸ್ ನಾನು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಕಣದಲ್ಲಿ ಇದ್ದೇನೆ. ಅದರೆ ಎನ್ ಡಿಎ ಕೂಟದ ಕರಪತ್ರದಲ್ಲಿ ನನ್ನ ಹೆಸರಿರುವುದು ನನಗೆ ಗೊತ್ತಿಲ್ಲ, ನನ್ನ ಗಮನಕ್ಕೆ ತರದೆ ಕರಪತ್ರದಲ್ಲಿ ನನ್ನ ಹೆಸರು ಹಾಕಿಕೊಂಡಿದ್ದಾರೆ ಎಂದರು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…