ದೊಡ್ಡಬಳ್ಳಾಪುರ : ಶ್ರೀನಿವಾಸ್ ಮೂರ್ತಿ ಯಾವ ಪಕ್ಷದ ಅಭ್ಯರ್ಥಿ ಎಂಬುದೇ ಗೊಂದಲಮಾಯವಾಗಿದೆ. ಸ್ಥಳೀಯವಾಗಿ, ನವೆಂಬರ್ 2ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲೂಕು ವ್ಯವಸಾಯೋತ್ಪನ್ನ ಸಹಕಾರಿ ಸಂಘದ ಚುನಾವಣೆಯ ‘ಎ’ ತರಗತಿ ಸ್ಥಾನದ ಅಭ್ಯರ್ಥಿ ಶ್ರೀನಿವಾಸ್ ಮೂರ್ತಿ.ಬಿ.ಎನ್ ಕಾಂಗ್ರೆಸ್ ಬೆಂಬಲಿತ ಮತ್ತು ಎನ್ ಡಿಎ ಕೂಟದ ಎರಡು ಕರಪತ್ರಗಳಲ್ಲಿ ಕಾಣಿಸಿಕೊಂಡಿರುವುದು ಮತದಾರರ ಗೊಂದಲಕ್ಕೆ ಕಾರಣವಾಗಿದೆ.
‘ಎ’ ತರಗತಿ ಸ್ಥಾನದ ಅಭ್ಯರ್ಥಿ ಶ್ರೀನಿವಾಸ್ ಮೂರ್ತಿ ಪರವಾಗಿ ಕಾಂಗ್ರೆಸ್ ಒಂದೆಡೆ ಪ್ರಚಾರ ಮಾಡಿದರೆ ಮತ್ತೊಂದೆಡೆ ಎನ್ ಡಿ ಎ ( ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ) ಪ್ರಚಾರ ಮಾಡುತ್ತಿದ್ದೆ. ಎರಡು ಪಕ್ಷಗಳು ಮತಯಾಚನೆ ಕರಪತ್ರದಲ್ಲಿ ತಮ್ಮ ಬೆಂಬಲಿತ ಅಭ್ಯರ್ಥಿಗಳ ಪಟ್ಟಿಯಲ್ಲಿ ಮುದ್ರಿಸಿದ್ದು, ಎರಡು ಕರಪತ್ರಗಳಲ್ಲಿ ಗಂಟಿಗಾನಹಳ್ಳಿ ‘ಎ’ ತರಗತಿ ಸ್ಥಾನದ ಅಭ್ಯರ್ಥಿ ಶ್ರೀನಿವಾಸ್ ಮೂರ್ತಿ ಬಿ.ಎನ್ ಭಾವಚಿತ್ರವಿರುವುದು ಮತದಾರರಲ್ಲಿ ಗೊಂದಲ ಮೂಡಿಸಿದೆ. ಇದೆಂತಾ ಸರ್ವ ಪಕ್ಷಗಳ ಮೈತ್ರಿ ಎನ್ನುವ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಶ್ರೀನಿವಾಸಮೂರ್ತಿ.ಬಿ.ಎಸ್ ನಾನು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಕಣದಲ್ಲಿ ಇದ್ದೇನೆ. ಅದರೆ ಎನ್ ಡಿಎ ಕೂಟದ ಕರಪತ್ರದಲ್ಲಿ ನನ್ನ ಹೆಸರಿರುವುದು ನನಗೆ ಗೊತ್ತಿಲ್ಲ, ನನ್ನ ಗಮನಕ್ಕೆ ತರದೆ ಕರಪತ್ರದಲ್ಲಿ ನನ್ನ ಹೆಸರು ಹಾಕಿಕೊಂಡಿದ್ದಾರೆ ಎಂದರು.
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…