TAPMCS Election : ಶ್ರೀನಿವಾಸ್ ಮೂರ್ತಿ ಯಾವ ಪಕ್ಷದ ಅಭ್ಯರ್ಥಿ…?: ಕಾಂಗ್ರೆಸ್ ಮತ್ತು NDA ಕೂಟದ ಎರಡು ಕರಪತ್ರಗಳಲ್ಲಿ ಕಾಣಿಸಿಕೊಂಡ ಅಭ್ಯರ್ಥಿ: ಮತದಾರರಲ್ಲಿ ಗೊಂದಲ

ದೊಡ್ಡಬಳ್ಳಾಪುರ : ಶ್ರೀನಿವಾಸ್ ಮೂರ್ತಿ ಯಾವ ಪಕ್ಷದ ಅಭ್ಯರ್ಥಿ ಎಂಬುದೇ ಗೊಂದಲಮಾಯವಾಗಿದೆ. ಸ್ಥಳೀಯವಾಗಿ, ನವೆಂಬರ್ 2ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲೂಕು ವ್ಯವಸಾಯೋತ್ಪನ್ನ ಸಹಕಾರಿ ಸಂಘದ ಚುನಾವಣೆಯ ‘ಎ’ ತರಗತಿ ಸ್ಥಾನದ ಅಭ್ಯರ್ಥಿ ಶ್ರೀನಿವಾಸ್ ಮೂರ್ತಿ.ಬಿ.ಎನ್ ಕಾಂಗ್ರೆಸ್ ಬೆಂಬಲಿತ ಮತ್ತು ಎನ್ ಡಿಎ ಕೂಟದ ಎರಡು ಕರಪತ್ರಗಳಲ್ಲಿ ಕಾಣಿಸಿಕೊಂಡಿರುವುದು ಮತದಾರರ ಗೊಂದಲಕ್ಕೆ ಕಾರಣವಾಗಿದೆ.

‘ಎ’ ತರಗತಿ ಸ್ಥಾನದ ಅಭ್ಯರ್ಥಿ ಶ್ರೀನಿವಾಸ್ ಮೂರ್ತಿ ಪರವಾಗಿ ಕಾಂಗ್ರೆಸ್ ಒಂದೆಡೆ ಪ್ರಚಾರ ಮಾಡಿದರೆ ಮತ್ತೊಂದೆಡೆ ಎನ್ ಡಿ ಎ ( ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ) ಪ್ರಚಾರ ಮಾಡುತ್ತಿದ್ದೆ. ಎರಡು ಪಕ್ಷಗಳು ಮತಯಾಚನೆ ಕರಪತ್ರದಲ್ಲಿ ತಮ್ಮ ಬೆಂಬಲಿತ ಅಭ್ಯರ್ಥಿಗಳ ಪಟ್ಟಿಯಲ್ಲಿ ಮುದ್ರಿಸಿದ್ದು, ಎರಡು ಕರಪತ್ರಗಳಲ್ಲಿ ಗಂಟಿಗಾನಹಳ್ಳಿ ‘ಎ’ ತರಗತಿ ಸ್ಥಾನದ ಅಭ್ಯರ್ಥಿ ಶ್ರೀನಿವಾಸ್ ಮೂರ್ತಿ ಬಿ.ಎನ್ ಭಾವಚಿತ್ರವಿರುವುದು ಮತದಾರರಲ್ಲಿ ಗೊಂದಲ ಮೂಡಿಸಿದೆ. ಇದೆಂತಾ ಸರ್ವ ಪಕ್ಷಗಳ ಮೈತ್ರಿ ಎನ್ನುವ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಶ್ರೀನಿವಾಸಮೂರ್ತಿ.ಬಿ.ಎಸ್ ನಾನು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಕಣದಲ್ಲಿ ಇದ್ದೇನೆ. ಅದರೆ ಎನ್ ಡಿಎ ಕೂಟದ ಕರಪತ್ರದಲ್ಲಿ ನನ್ನ ಹೆಸರಿರುವುದು ನನಗೆ ಗೊತ್ತಿಲ್ಲ, ನನ್ನ ಗಮನಕ್ಕೆ ತರದೆ ಕರಪತ್ರದಲ್ಲಿ ನನ್ನ ಹೆಸರು ಹಾಕಿಕೊಂಡಿದ್ದಾರೆ ಎಂದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

9 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

10 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago