TAPMCS Election : ಶ್ರೀನಿವಾಸ್ ಮೂರ್ತಿ ಯಾವ ಪಕ್ಷದ ಅಭ್ಯರ್ಥಿ…?: ಕಾಂಗ್ರೆಸ್ ಮತ್ತು NDA ಕೂಟದ ಎರಡು ಕರಪತ್ರಗಳಲ್ಲಿ ಕಾಣಿಸಿಕೊಂಡ ಅಭ್ಯರ್ಥಿ: ಮತದಾರರಲ್ಲಿ ಗೊಂದಲ

ದೊಡ್ಡಬಳ್ಳಾಪುರ : ಶ್ರೀನಿವಾಸ್ ಮೂರ್ತಿ ಯಾವ ಪಕ್ಷದ ಅಭ್ಯರ್ಥಿ ಎಂಬುದೇ ಗೊಂದಲಮಾಯವಾಗಿದೆ. ಸ್ಥಳೀಯವಾಗಿ, ನವೆಂಬರ್ 2ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲೂಕು ವ್ಯವಸಾಯೋತ್ಪನ್ನ ಸಹಕಾರಿ ಸಂಘದ ಚುನಾವಣೆಯ ‘ಎ’ ತರಗತಿ ಸ್ಥಾನದ ಅಭ್ಯರ್ಥಿ ಶ್ರೀನಿವಾಸ್ ಮೂರ್ತಿ.ಬಿ.ಎನ್ ಕಾಂಗ್ರೆಸ್ ಬೆಂಬಲಿತ ಮತ್ತು ಎನ್ ಡಿಎ ಕೂಟದ ಎರಡು ಕರಪತ್ರಗಳಲ್ಲಿ ಕಾಣಿಸಿಕೊಂಡಿರುವುದು ಮತದಾರರ ಗೊಂದಲಕ್ಕೆ ಕಾರಣವಾಗಿದೆ.

‘ಎ’ ತರಗತಿ ಸ್ಥಾನದ ಅಭ್ಯರ್ಥಿ ಶ್ರೀನಿವಾಸ್ ಮೂರ್ತಿ ಪರವಾಗಿ ಕಾಂಗ್ರೆಸ್ ಒಂದೆಡೆ ಪ್ರಚಾರ ಮಾಡಿದರೆ ಮತ್ತೊಂದೆಡೆ ಎನ್ ಡಿ ಎ ( ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ) ಪ್ರಚಾರ ಮಾಡುತ್ತಿದ್ದೆ. ಎರಡು ಪಕ್ಷಗಳು ಮತಯಾಚನೆ ಕರಪತ್ರದಲ್ಲಿ ತಮ್ಮ ಬೆಂಬಲಿತ ಅಭ್ಯರ್ಥಿಗಳ ಪಟ್ಟಿಯಲ್ಲಿ ಮುದ್ರಿಸಿದ್ದು, ಎರಡು ಕರಪತ್ರಗಳಲ್ಲಿ ಗಂಟಿಗಾನಹಳ್ಳಿ ‘ಎ’ ತರಗತಿ ಸ್ಥಾನದ ಅಭ್ಯರ್ಥಿ ಶ್ರೀನಿವಾಸ್ ಮೂರ್ತಿ ಬಿ.ಎನ್ ಭಾವಚಿತ್ರವಿರುವುದು ಮತದಾರರಲ್ಲಿ ಗೊಂದಲ ಮೂಡಿಸಿದೆ. ಇದೆಂತಾ ಸರ್ವ ಪಕ್ಷಗಳ ಮೈತ್ರಿ ಎನ್ನುವ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಶ್ರೀನಿವಾಸಮೂರ್ತಿ.ಬಿ.ಎಸ್ ನಾನು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಕಣದಲ್ಲಿ ಇದ್ದೇನೆ. ಅದರೆ ಎನ್ ಡಿಎ ಕೂಟದ ಕರಪತ್ರದಲ್ಲಿ ನನ್ನ ಹೆಸರಿರುವುದು ನನಗೆ ಗೊತ್ತಿಲ್ಲ, ನನ್ನ ಗಮನಕ್ಕೆ ತರದೆ ಕರಪತ್ರದಲ್ಲಿ ನನ್ನ ಹೆಸರು ಹಾಕಿಕೊಂಡಿದ್ದಾರೆ ಎಂದರು.

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

49 minutes ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago