TAPMCS Election : ಶ್ರೀನಿವಾಸ್ ಮೂರ್ತಿ ಯಾವ ಪಕ್ಷದ ಅಭ್ಯರ್ಥಿ…?: ಕಾಂಗ್ರೆಸ್ ಮತ್ತು NDA ಕೂಟದ ಎರಡು ಕರಪತ್ರಗಳಲ್ಲಿ ಕಾಣಿಸಿಕೊಂಡ ಅಭ್ಯರ್ಥಿ: ಮತದಾರರಲ್ಲಿ ಗೊಂದಲ

ದೊಡ್ಡಬಳ್ಳಾಪುರ : ಶ್ರೀನಿವಾಸ್ ಮೂರ್ತಿ ಯಾವ ಪಕ್ಷದ ಅಭ್ಯರ್ಥಿ ಎಂಬುದೇ ಗೊಂದಲಮಾಯವಾಗಿದೆ. ಸ್ಥಳೀಯವಾಗಿ, ನವೆಂಬರ್ 2ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲೂಕು ವ್ಯವಸಾಯೋತ್ಪನ್ನ ಸಹಕಾರಿ ಸಂಘದ ಚುನಾವಣೆಯ ‘ಎ’ ತರಗತಿ ಸ್ಥಾನದ ಅಭ್ಯರ್ಥಿ ಶ್ರೀನಿವಾಸ್ ಮೂರ್ತಿ.ಬಿ.ಎನ್ ಕಾಂಗ್ರೆಸ್ ಬೆಂಬಲಿತ ಮತ್ತು ಎನ್ ಡಿಎ ಕೂಟದ ಎರಡು ಕರಪತ್ರಗಳಲ್ಲಿ ಕಾಣಿಸಿಕೊಂಡಿರುವುದು ಮತದಾರರ ಗೊಂದಲಕ್ಕೆ ಕಾರಣವಾಗಿದೆ.

‘ಎ’ ತರಗತಿ ಸ್ಥಾನದ ಅಭ್ಯರ್ಥಿ ಶ್ರೀನಿವಾಸ್ ಮೂರ್ತಿ ಪರವಾಗಿ ಕಾಂಗ್ರೆಸ್ ಒಂದೆಡೆ ಪ್ರಚಾರ ಮಾಡಿದರೆ ಮತ್ತೊಂದೆಡೆ ಎನ್ ಡಿ ಎ ( ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ) ಪ್ರಚಾರ ಮಾಡುತ್ತಿದ್ದೆ. ಎರಡು ಪಕ್ಷಗಳು ಮತಯಾಚನೆ ಕರಪತ್ರದಲ್ಲಿ ತಮ್ಮ ಬೆಂಬಲಿತ ಅಭ್ಯರ್ಥಿಗಳ ಪಟ್ಟಿಯಲ್ಲಿ ಮುದ್ರಿಸಿದ್ದು, ಎರಡು ಕರಪತ್ರಗಳಲ್ಲಿ ಗಂಟಿಗಾನಹಳ್ಳಿ ‘ಎ’ ತರಗತಿ ಸ್ಥಾನದ ಅಭ್ಯರ್ಥಿ ಶ್ರೀನಿವಾಸ್ ಮೂರ್ತಿ ಬಿ.ಎನ್ ಭಾವಚಿತ್ರವಿರುವುದು ಮತದಾರರಲ್ಲಿ ಗೊಂದಲ ಮೂಡಿಸಿದೆ. ಇದೆಂತಾ ಸರ್ವ ಪಕ್ಷಗಳ ಮೈತ್ರಿ ಎನ್ನುವ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಶ್ರೀನಿವಾಸಮೂರ್ತಿ.ಬಿ.ಎಸ್ ನಾನು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಕಣದಲ್ಲಿ ಇದ್ದೇನೆ. ಅದರೆ ಎನ್ ಡಿಎ ಕೂಟದ ಕರಪತ್ರದಲ್ಲಿ ನನ್ನ ಹೆಸರಿರುವುದು ನನಗೆ ಗೊತ್ತಿಲ್ಲ, ನನ್ನ ಗಮನಕ್ಕೆ ತರದೆ ಕರಪತ್ರದಲ್ಲಿ ನನ್ನ ಹೆಸರು ಹಾಕಿಕೊಂಡಿದ್ದಾರೆ ಎಂದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

4 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

7 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

15 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

16 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago