U19 World Cup: ಐಸಿಸಿ ಅಂಡರ್-19 ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ ಭಾರತ ದಾಖಲೆಯ 6ನೇ ಬಾರಿಗೆ U19 World Cup ಗೆದ್ದು ಬೀಗಿದೆ.
ಹರಾರೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿತು. ಭಾರತದ ಸ್ಟಾರ್ ಬ್ಯಾಟರ್ ವೈಭವ್ ಸೂರ್ಯವಂಶಿ ಅವರ 175 ರನ್ ಗಳ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 411 ರನ್ ಪೇರಿಸಿತ್ತು.
ಭಾರತ ನೀಡಿದ 412 ರನ್ ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್ ಯುವಪಡೆ 311 ರನ್ ಗಳಿಗೆ ಆಲೌಟ್ ಆಗುವ ಮೂಲಕ 100 ರನ್ ಗಳಿಂದ ಸೋಲು ಕಂಡಿದೆ.
ಭಾರತ ಪರ ನಾಯಕ ಆಯುಷ್ ಮ್ಹಾತ್ರೆ 53 ರನ್ ಗಳಿಸಿದರೇ, ಅಭಿಗ್ಯಾನ್ ಕುಂಡು 40, ಕನಿಷ್ಕ್ ಚೌಹಾಣ್ ಅಜೇಯ 37 ಮತ್ತು ವೇದಾಂತ್ ತ್ರಿವೇದಿ 32 ರನ್ ಗಳಿಸಿದರು. ಜೇಮ್ಸ್ ಮಿಂಟೊ ಇಂಗ್ಲೆಂಡ್ ಪರ ಮೂರು ವಿಕೆಟ್ ಪಡೆದರು.
ಇಂಗ್ಲೆಂಡ್ ಪರ ಕ್ಯಾಲೆಬ್ ಫಾಲ್ಕನರ್ ಸ್ಫೋಟಕ ಬ್ಯಾಟಿಂಗ್ ಮಾಡಿ 115 ರನ್ ಕಲೆಹಾಕಿದರು. ಬೆನ್ ಡಾಕಿನ್ಸ್ ಉತ್ತಮ ಬ್ಯಾಟಿಂಗ್ ಮಾಡಿ 66 ರನ್ ಕಲೆ ಹಾಕಿದರು. ಬೆನ್ ಮೇಯಸ್ 45, ಥಾಮಸ್ ರೆವ್ 31 ರನ್ ಕಲೆ ಹಾಕಿದರು. ಭಾರತದ ಪರ ಅಂಬರೀಶ್ 3, ದೀಪೇಶ್ ದೇವೇಂದ್ರನ್, ಕನಿಷ್ಕ್ ಚೌಹಾನ್ ತಲಾ 2 ವಿಕೆಟ್, ಕಿಲಾನ್ ಪಟೇಲ್ ಮತ್ತು ಆಯೂಶ್ ಮಾತ್ರೆ ತಲಾ 1 ವಿಕೆಟ್ ಪಡೆದಿದ್ದಾರೆ.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…