U19 World Cup: ಐಸಿಸಿ ಅಂಡರ್-19 ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ ಭಾರತ ದಾಖಲೆಯ 6ನೇ ಬಾರಿಗೆ U19 World Cup ಗೆದ್ದು ಬೀಗಿದೆ.
ಹರಾರೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿತು. ಭಾರತದ ಸ್ಟಾರ್ ಬ್ಯಾಟರ್ ವೈಭವ್ ಸೂರ್ಯವಂಶಿ ಅವರ 175 ರನ್ ಗಳ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 411 ರನ್ ಪೇರಿಸಿತ್ತು.
ಭಾರತ ನೀಡಿದ 412 ರನ್ ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್ ಯುವಪಡೆ 311 ರನ್ ಗಳಿಗೆ ಆಲೌಟ್ ಆಗುವ ಮೂಲಕ 100 ರನ್ ಗಳಿಂದ ಸೋಲು ಕಂಡಿದೆ.
ಭಾರತ ಪರ ನಾಯಕ ಆಯುಷ್ ಮ್ಹಾತ್ರೆ 53 ರನ್ ಗಳಿಸಿದರೇ, ಅಭಿಗ್ಯಾನ್ ಕುಂಡು 40, ಕನಿಷ್ಕ್ ಚೌಹಾಣ್ ಅಜೇಯ 37 ಮತ್ತು ವೇದಾಂತ್ ತ್ರಿವೇದಿ 32 ರನ್ ಗಳಿಸಿದರು. ಜೇಮ್ಸ್ ಮಿಂಟೊ ಇಂಗ್ಲೆಂಡ್ ಪರ ಮೂರು ವಿಕೆಟ್ ಪಡೆದರು.
ಇಂಗ್ಲೆಂಡ್ ಪರ ಕ್ಯಾಲೆಬ್ ಫಾಲ್ಕನರ್ ಸ್ಫೋಟಕ ಬ್ಯಾಟಿಂಗ್ ಮಾಡಿ 115 ರನ್ ಕಲೆಹಾಕಿದರು. ಬೆನ್ ಡಾಕಿನ್ಸ್ ಉತ್ತಮ ಬ್ಯಾಟಿಂಗ್ ಮಾಡಿ 66 ರನ್ ಕಲೆ ಹಾಕಿದರು. ಬೆನ್ ಮೇಯಸ್ 45, ಥಾಮಸ್ ರೆವ್ 31 ರನ್ ಕಲೆ ಹಾಕಿದರು. ಭಾರತದ ಪರ ಅಂಬರೀಶ್ 3, ದೀಪೇಶ್ ದೇವೇಂದ್ರನ್, ಕನಿಷ್ಕ್ ಚೌಹಾನ್ ತಲಾ 2 ವಿಕೆಟ್, ಕಿಲಾನ್ ಪಟೇಲ್ ಮತ್ತು ಆಯೂಶ್ ಮಾತ್ರೆ ತಲಾ 1 ವಿಕೆಟ್ ಪಡೆದಿದ್ದಾರೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…