U19 World Cup: ಐಸಿಸಿ ಅಂಡರ್-19 ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ ಭಾರತ ದಾಖಲೆಯ 6ನೇ ಬಾರಿಗೆ U19 World Cup ಗೆದ್ದು ಬೀಗಿದೆ.
ಹರಾರೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿತು. ಭಾರತದ ಸ್ಟಾರ್ ಬ್ಯಾಟರ್ ವೈಭವ್ ಸೂರ್ಯವಂಶಿ ಅವರ 175 ರನ್ ಗಳ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 411 ರನ್ ಪೇರಿಸಿತ್ತು.
ಭಾರತ ನೀಡಿದ 412 ರನ್ ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್ ಯುವಪಡೆ 311 ರನ್ ಗಳಿಗೆ ಆಲೌಟ್ ಆಗುವ ಮೂಲಕ 100 ರನ್ ಗಳಿಂದ ಸೋಲು ಕಂಡಿದೆ.
ಭಾರತ ಪರ ನಾಯಕ ಆಯುಷ್ ಮ್ಹಾತ್ರೆ 53 ರನ್ ಗಳಿಸಿದರೇ, ಅಭಿಗ್ಯಾನ್ ಕುಂಡು 40, ಕನಿಷ್ಕ್ ಚೌಹಾಣ್ ಅಜೇಯ 37 ಮತ್ತು ವೇದಾಂತ್ ತ್ರಿವೇದಿ 32 ರನ್ ಗಳಿಸಿದರು. ಜೇಮ್ಸ್ ಮಿಂಟೊ ಇಂಗ್ಲೆಂಡ್ ಪರ ಮೂರು ವಿಕೆಟ್ ಪಡೆದರು.
ಇಂಗ್ಲೆಂಡ್ ಪರ ಕ್ಯಾಲೆಬ್ ಫಾಲ್ಕನರ್ ಸ್ಫೋಟಕ ಬ್ಯಾಟಿಂಗ್ ಮಾಡಿ 115 ರನ್ ಕಲೆಹಾಕಿದರು. ಬೆನ್ ಡಾಕಿನ್ಸ್ ಉತ್ತಮ ಬ್ಯಾಟಿಂಗ್ ಮಾಡಿ 66 ರನ್ ಕಲೆ ಹಾಕಿದರು. ಬೆನ್ ಮೇಯಸ್ 45, ಥಾಮಸ್ ರೆವ್ 31 ರನ್ ಕಲೆ ಹಾಕಿದರು. ಭಾರತದ ಪರ ಅಂಬರೀಶ್ 3, ದೀಪೇಶ್ ದೇವೇಂದ್ರನ್, ಕನಿಷ್ಕ್ ಚೌಹಾನ್ ತಲಾ 2 ವಿಕೆಟ್, ಕಿಲಾನ್ ಪಟೇಲ್ ಮತ್ತು ಆಯೂಶ್ ಮಾತ್ರೆ ತಲಾ 1 ವಿಕೆಟ್ ಪಡೆದಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…