U19 World Cup: ಐಸಿಸಿ ಅಂಡರ್-19 ವಿಶ್ವಕಪ್ 2026ರ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ ಭಾರತ ದಾಖಲೆಯ 6ನೇ ಬಾರಿಗೆ U19 World Cup ಗೆದ್ದು ಬೀಗಿದೆ.
ಹರಾರೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿತು. ಭಾರತದ ಸ್ಟಾರ್ ಬ್ಯಾಟರ್ ವೈಭವ್ ಸೂರ್ಯವಂಶಿ ಅವರ 175 ರನ್ ಗಳ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 411 ರನ್ ಪೇರಿಸಿತ್ತು.
ಭಾರತ ನೀಡಿದ 412 ರನ್ ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್ ಯುವಪಡೆ 311 ರನ್ ಗಳಿಗೆ ಆಲೌಟ್ ಆಗುವ ಮೂಲಕ 100 ರನ್ ಗಳಿಂದ ಸೋಲು ಕಂಡಿದೆ.
ಭಾರತ ಪರ ನಾಯಕ ಆಯುಷ್ ಮ್ಹಾತ್ರೆ 53 ರನ್ ಗಳಿಸಿದರೇ, ಅಭಿಗ್ಯಾನ್ ಕುಂಡು 40, ಕನಿಷ್ಕ್ ಚೌಹಾಣ್ ಅಜೇಯ 37 ಮತ್ತು ವೇದಾಂತ್ ತ್ರಿವೇದಿ 32 ರನ್ ಗಳಿಸಿದರು. ಜೇಮ್ಸ್ ಮಿಂಟೊ ಇಂಗ್ಲೆಂಡ್ ಪರ ಮೂರು ವಿಕೆಟ್ ಪಡೆದರು.
ಇಂಗ್ಲೆಂಡ್ ಪರ ಕ್ಯಾಲೆಬ್ ಫಾಲ್ಕನರ್ ಸ್ಫೋಟಕ ಬ್ಯಾಟಿಂಗ್ ಮಾಡಿ 115 ರನ್ ಕಲೆಹಾಕಿದರು. ಬೆನ್ ಡಾಕಿನ್ಸ್ ಉತ್ತಮ ಬ್ಯಾಟಿಂಗ್ ಮಾಡಿ 66 ರನ್ ಕಲೆ ಹಾಕಿದರು. ಬೆನ್ ಮೇಯಸ್ 45, ಥಾಮಸ್ ರೆವ್ 31 ರನ್ ಕಲೆ ಹಾಕಿದರು. ಭಾರತದ ಪರ ಅಂಬರೀಶ್ 3, ದೀಪೇಶ್ ದೇವೇಂದ್ರನ್, ಕನಿಷ್ಕ್ ಚೌಹಾನ್ ತಲಾ 2 ವಿಕೆಟ್, ಕಿಲಾನ್ ಪಟೇಲ್ ಮತ್ತು ಆಯೂಶ್ ಮಾತ್ರೆ ತಲಾ 1 ವಿಕೆಟ್ ಪಡೆದಿದ್ದಾರೆ.
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…