ದೇಶದ ಪ್ರತಿಷ್ಠಿತ ಹಾಗೂ ಕಠಿಣ ಪರೀಕ್ಷೆಗಳಲ್ಲಿ ಒಂದಾದ ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವಾ ಪರೀಕ್ಷೆಗಳ 2022ನೇ ಸಾಲಿನ ಫಲಿತಾಂಶ ಪ್ರಕಟವಾಗಿದ್ದು, ಆಶಿತಾ ಕಿಶೋರ್ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
ಈ ಬಾರಿ ಕರ್ನಾಟಕದ 25 ಮಂದಿ ಆಯ್ಕೆಯಾಗಿದ್ದು ಬಹಳ ಸಂತಸದ ಸಂಗತಿಯಾಗಿದೆ, ಕೋಟ್ಯಂತರ ಯುವಕ ಯುವತಿಯರ ಕನಸಾಗಿರುವ ಯುಪಿಎಸ್ಸಿ ಪರೀಕ್ಷೆಯಲ್ಲಿ ಪಾಸಗುವುದು ಎಂದರೆ ಅಷ್ಟು ಸುಲಭದ ಮಾತಲ್ಲ, ಅದರಲ್ಲೂ ಪಾಸಗಿರುವ ಎಲ್ಲಾ ಅಧಿಕಾರಿಗಳಿಗೆ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ.
ಐಎಎಸ್ 180, ಐಪಿಎಸ್ 200, ಐಎಫ್ಎಸ್ 38, ಗ್ರೂಪ್ ಎ 473, ಹಾಗೂ ಗ್ರೂಪ್ ಬಿ ಹುದ್ದೆಗೆ 131ಮಂದಿ ಆಯ್ಕೆಯಾಗಿದ್ದಾರೆ.
IAS ಪರೀಕ್ಷೆಯಲ್ಲಿ ಕಾಣಿಸಿಕೊಂಡ ಅಭ್ಯರ್ಥಿಗಳು UPSC ಯ ಅಧಿಕೃತ ವೆಬ್ಸೈಟ್ www.upsc.gov.in ನಲ್ಲಿ ಅಂತಿಮ ಫಲಿತಾಂಶವನ್ನು ಪರಿಶೀಲಿಸಬಹುದು.
ಪರೀಕ್ಷೆಯ ಅಂತಿಮ ಫಲಿತಾಂಶದಲ್ಲಿ ಒಟ್ಟು 933 ಅಭ್ಯರ್ಥಿಗಳು ನೇಮಕಾತಿಗೆ ಆಯ್ಕೆಯಾಗಿದ್ದಾರೆ. ಈ ಪೈಕಿ 345 ಅಭ್ಯರ್ಥಿಗಳು ಮೀಸಲಾತಿ ರಹಿತ, 99 ಇಡಬ್ಲ್ಯೂಎಸ್, 263 ಒಬಿಸಿ, 154 ಎಸ್ಸಿ ಮತ್ತು 72 ಎಸ್ಟಿ ವರ್ಗದವರು. 178 ಅಭ್ಯರ್ಥಿಗಳ ಮೀಸಲು ಪಟ್ಟಿಯನ್ನೂ ಸಿದ್ಧಪಡಿಸಲಾಗಿದೆ. ಐಎಎಸ್ ಹುದ್ದೆಗಳ ಆಯ್ಕೆಗೆ 180 ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಲಾಗಿದೆ.
ಟಾಪ್ 10ರ ಸ್ಥಾನದಲ್ಲಿ ಇರುವ ಅಭ್ಯರ್ಥಿಗಳು
1. ಇಶಿತಾ ಕಿಶೋರ್
2. ಗರಿಮಾ ಲೋಹಿಯಾ
3. ಉಮಾ ಹಾರ್ತಿ ಎನ್
4. ಸ್ಮೃತಿ ಮಿಶ್ರಾ
5. ಮಯೂರ್ ಹಜಾರಿಕಾ
6. ಆಭರಣ ನವ್ಯಾ ಜೇಮ್ಸ್
7. ವಾಸಿಂ ಅಹ್ಮದ್ ಭಟ್
8. ಅನಿರುದ್ಧ್ ಯಾದವ್
9. ಕನಿಕಾ ಗೋಯಲ್
10. ರಾಹುಲ್ ಶ್ರೀವಾಸ್ತವ್
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…