UPSC 2022ರ ಫಲಿತಾಂಶ ರಿಲೀಸ್: ಟಾಪರ್ ಆದ ಇಶಿತಾ ಕಿಶೋರ್: ಮೊದಲ ನಾಲ್ಕು ಸ್ಥಾನಗಳು ಮಹಿಳೆಯರ ಪಾಲು

 

ದೇಶದ ಪ್ರತಿಷ್ಠಿತ ಹಾಗೂ ಕಠಿಣ ಪರೀಕ್ಷೆಗಳಲ್ಲಿ ಒಂದಾದ ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವಾ ಪರೀಕ್ಷೆಗಳ 2022ನೇ ಸಾಲಿನ ಫಲಿತಾಂಶ ಪ್ರಕಟವಾಗಿದ್ದು, ಆಶಿತಾ ಕಿಶೋರ್ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

ಆಶಿತಾ ಕಿಶೋರ್ ಅವರು ನವದೆಹಲಿಯ ಶ್ರೀರಾಮ್‌ ಕಾಲೇಜ್‌ ಆಫ್‌ ಕಾಮರ್ಸ್‌ನಲ್ಲಿ ಅರ್ಥಶಾಸ್ತ್ರ ವಿಭಾಗದಲ್ಲಿ ಪದವೀಧರೆಯಾಗಿದ್ದಾರೆ. ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಯುಪಿಎಸ್‌ಸಿ ಸಿಎಸ್‌ಇ 2022 ರ ಅಂತಿಮ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಿದ್ದು, ಇಶಿತಾ ಕಿಶೋರ್ ಮೊದಲ ಸ್ಥಾನ, ಗರಿಮಾ ಲೋಹಿಯಾ ಎರಡನೇ ಸ್ಥಾನದಲ್ಲಿದ್ದಾರೆ, ಉಮಾ ಹರ್ತಿ.ಎನ್ ಮೂರನೇ ಮತ್ತು ಸ್ಮೃತಿ ಮಿಶ್ರಾ ನಾಲ್ಕನೇ ಸ್ಥಾನದಲ್ಲಿದ್ದಾರೆ. ಮೊದಲ ನಾಲ್ಕು ಸ್ಥಾನಗಳು ಮಹಿಳೆಯರ ಪಾಲಾಗಿರುವುದು ವಿಶೇಷ.

ಈ ಬಾರಿ ಕರ್ನಾಟಕದ 25 ಮಂದಿ ಆಯ್ಕೆಯಾಗಿದ್ದು ಬಹಳ ಸಂತಸದ ಸಂಗತಿಯಾಗಿದೆ, ಕೋಟ್ಯಂತರ ಯುವಕ ಯುವತಿಯರ ಕನಸಾಗಿರುವ ಯುಪಿಎಸ್ಸಿ ಪರೀಕ್ಷೆಯಲ್ಲಿ ಪಾಸಗುವುದು ಎಂದರೆ ಅಷ್ಟು ಸುಲಭದ ಮಾತಲ್ಲ, ಅದರಲ್ಲೂ ಪಾಸಗಿರುವ ಎಲ್ಲಾ ಅಧಿಕಾರಿಗಳಿಗೆ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ.

ಐಎಎಸ್ 180, ಐಪಿಎಸ್ 200, ಐಎಫ್ಎಸ್ 38, ಗ್ರೂಪ್ ಎ 473, ಹಾಗೂ ಗ್ರೂಪ್ ಬಿ ಹುದ್ದೆಗೆ 131ಮಂದಿ ಆಯ್ಕೆಯಾಗಿದ್ದಾರೆ.

IAS ಪರೀಕ್ಷೆಯಲ್ಲಿ ಕಾಣಿಸಿಕೊಂಡ ಅಭ್ಯರ್ಥಿಗಳು UPSC ಯ ಅಧಿಕೃತ ವೆಬ್‌ಸೈಟ್ www.upsc.gov.in ನಲ್ಲಿ ಅಂತಿಮ ಫಲಿತಾಂಶವನ್ನು ಪರಿಶೀಲಿಸಬಹುದು.

ಪರೀಕ್ಷೆಯ ಅಂತಿಮ ಫಲಿತಾಂಶದಲ್ಲಿ ಒಟ್ಟು 933 ಅಭ್ಯರ್ಥಿಗಳು ನೇಮಕಾತಿಗೆ ಆಯ್ಕೆಯಾಗಿದ್ದಾರೆ. ಈ ಪೈಕಿ 345 ಅಭ್ಯರ್ಥಿಗಳು ಮೀಸಲಾತಿ ರಹಿತ, 99 ಇಡಬ್ಲ್ಯೂಎಸ್, 263 ಒಬಿಸಿ, 154 ಎಸ್‌ಸಿ ಮತ್ತು 72 ಎಸ್‌ಟಿ ವರ್ಗದವರು. 178 ಅಭ್ಯರ್ಥಿಗಳ ಮೀಸಲು ಪಟ್ಟಿಯನ್ನೂ ಸಿದ್ಧಪಡಿಸಲಾಗಿದೆ. ಐಎಎಸ್ ಹುದ್ದೆಗಳ ಆಯ್ಕೆಗೆ 180 ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದೆ.

ಟಾಪ್ 10ರ ಸ್ಥಾನದಲ್ಲಿ ಇರುವ ಅಭ್ಯರ್ಥಿಗಳು

1. ಇಶಿತಾ ಕಿಶೋರ್
2. ಗರಿಮಾ ಲೋಹಿಯಾ
3. ಉಮಾ ಹಾರ್ತಿ ಎನ್
4. ಸ್ಮೃತಿ ಮಿಶ್ರಾ
5. ಮಯೂರ್ ಹಜಾರಿಕಾ
6. ಆಭರಣ ನವ್ಯಾ ಜೇಮ್ಸ್
7. ವಾಸಿಂ ಅಹ್ಮದ್ ಭಟ್
8. ಅನಿರುದ್ಧ್ ಯಾದವ್
9. ಕನಿಕಾ ಗೋಯಲ್
10. ರಾಹುಲ್ ಶ್ರೀವಾಸ್ತವ್

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

11 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

11 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

12 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

13 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

16 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

16 hours ago