ದೇಶದ ಪ್ರತಿಷ್ಠಿತ ಹಾಗೂ ಕಠಿಣ ಪರೀಕ್ಷೆಗಳಲ್ಲಿ ಒಂದಾದ ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವಾ ಪರೀಕ್ಷೆಗಳ 2022ನೇ ಸಾಲಿನ ಫಲಿತಾಂಶ ಪ್ರಕಟವಾಗಿದ್ದು, ಆಶಿತಾ ಕಿಶೋರ್ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
ಈ ಬಾರಿ ಕರ್ನಾಟಕದ 25 ಮಂದಿ ಆಯ್ಕೆಯಾಗಿದ್ದು ಬಹಳ ಸಂತಸದ ಸಂಗತಿಯಾಗಿದೆ, ಕೋಟ್ಯಂತರ ಯುವಕ ಯುವತಿಯರ ಕನಸಾಗಿರುವ ಯುಪಿಎಸ್ಸಿ ಪರೀಕ್ಷೆಯಲ್ಲಿ ಪಾಸಗುವುದು ಎಂದರೆ ಅಷ್ಟು ಸುಲಭದ ಮಾತಲ್ಲ, ಅದರಲ್ಲೂ ಪಾಸಗಿರುವ ಎಲ್ಲಾ ಅಧಿಕಾರಿಗಳಿಗೆ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ.
ಐಎಎಸ್ 180, ಐಪಿಎಸ್ 200, ಐಎಫ್ಎಸ್ 38, ಗ್ರೂಪ್ ಎ 473, ಹಾಗೂ ಗ್ರೂಪ್ ಬಿ ಹುದ್ದೆಗೆ 131ಮಂದಿ ಆಯ್ಕೆಯಾಗಿದ್ದಾರೆ.
IAS ಪರೀಕ್ಷೆಯಲ್ಲಿ ಕಾಣಿಸಿಕೊಂಡ ಅಭ್ಯರ್ಥಿಗಳು UPSC ಯ ಅಧಿಕೃತ ವೆಬ್ಸೈಟ್ www.upsc.gov.in ನಲ್ಲಿ ಅಂತಿಮ ಫಲಿತಾಂಶವನ್ನು ಪರಿಶೀಲಿಸಬಹುದು.
ಪರೀಕ್ಷೆಯ ಅಂತಿಮ ಫಲಿತಾಂಶದಲ್ಲಿ ಒಟ್ಟು 933 ಅಭ್ಯರ್ಥಿಗಳು ನೇಮಕಾತಿಗೆ ಆಯ್ಕೆಯಾಗಿದ್ದಾರೆ. ಈ ಪೈಕಿ 345 ಅಭ್ಯರ್ಥಿಗಳು ಮೀಸಲಾತಿ ರಹಿತ, 99 ಇಡಬ್ಲ್ಯೂಎಸ್, 263 ಒಬಿಸಿ, 154 ಎಸ್ಸಿ ಮತ್ತು 72 ಎಸ್ಟಿ ವರ್ಗದವರು. 178 ಅಭ್ಯರ್ಥಿಗಳ ಮೀಸಲು ಪಟ್ಟಿಯನ್ನೂ ಸಿದ್ಧಪಡಿಸಲಾಗಿದೆ. ಐಎಎಸ್ ಹುದ್ದೆಗಳ ಆಯ್ಕೆಗೆ 180 ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಲಾಗಿದೆ.
ಟಾಪ್ 10ರ ಸ್ಥಾನದಲ್ಲಿ ಇರುವ ಅಭ್ಯರ್ಥಿಗಳು
1. ಇಶಿತಾ ಕಿಶೋರ್
2. ಗರಿಮಾ ಲೋಹಿಯಾ
3. ಉಮಾ ಹಾರ್ತಿ ಎನ್
4. ಸ್ಮೃತಿ ಮಿಶ್ರಾ
5. ಮಯೂರ್ ಹಜಾರಿಕಾ
6. ಆಭರಣ ನವ್ಯಾ ಜೇಮ್ಸ್
7. ವಾಸಿಂ ಅಹ್ಮದ್ ಭಟ್
8. ಅನಿರುದ್ಧ್ ಯಾದವ್
9. ಕನಿಕಾ ಗೋಯಲ್
10. ರಾಹುಲ್ ಶ್ರೀವಾಸ್ತವ್
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…