ದೇಶದ ಪ್ರತಿಷ್ಠಿತ ಹಾಗೂ ಕಠಿಣ ಪರೀಕ್ಷೆಗಳಲ್ಲಿ ಒಂದಾದ ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವಾ ಪರೀಕ್ಷೆಗಳ 2022ನೇ ಸಾಲಿನ ಫಲಿತಾಂಶ ಪ್ರಕಟವಾಗಿದ್ದು, ಆಶಿತಾ ಕಿಶೋರ್ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
ಈ ಬಾರಿ ಕರ್ನಾಟಕದ 25 ಮಂದಿ ಆಯ್ಕೆಯಾಗಿದ್ದು ಬಹಳ ಸಂತಸದ ಸಂಗತಿಯಾಗಿದೆ, ಕೋಟ್ಯಂತರ ಯುವಕ ಯುವತಿಯರ ಕನಸಾಗಿರುವ ಯುಪಿಎಸ್ಸಿ ಪರೀಕ್ಷೆಯಲ್ಲಿ ಪಾಸಗುವುದು ಎಂದರೆ ಅಷ್ಟು ಸುಲಭದ ಮಾತಲ್ಲ, ಅದರಲ್ಲೂ ಪಾಸಗಿರುವ ಎಲ್ಲಾ ಅಧಿಕಾರಿಗಳಿಗೆ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ.
ಐಎಎಸ್ 180, ಐಪಿಎಸ್ 200, ಐಎಫ್ಎಸ್ 38, ಗ್ರೂಪ್ ಎ 473, ಹಾಗೂ ಗ್ರೂಪ್ ಬಿ ಹುದ್ದೆಗೆ 131ಮಂದಿ ಆಯ್ಕೆಯಾಗಿದ್ದಾರೆ.
IAS ಪರೀಕ್ಷೆಯಲ್ಲಿ ಕಾಣಿಸಿಕೊಂಡ ಅಭ್ಯರ್ಥಿಗಳು UPSC ಯ ಅಧಿಕೃತ ವೆಬ್ಸೈಟ್ www.upsc.gov.in ನಲ್ಲಿ ಅಂತಿಮ ಫಲಿತಾಂಶವನ್ನು ಪರಿಶೀಲಿಸಬಹುದು.
ಪರೀಕ್ಷೆಯ ಅಂತಿಮ ಫಲಿತಾಂಶದಲ್ಲಿ ಒಟ್ಟು 933 ಅಭ್ಯರ್ಥಿಗಳು ನೇಮಕಾತಿಗೆ ಆಯ್ಕೆಯಾಗಿದ್ದಾರೆ. ಈ ಪೈಕಿ 345 ಅಭ್ಯರ್ಥಿಗಳು ಮೀಸಲಾತಿ ರಹಿತ, 99 ಇಡಬ್ಲ್ಯೂಎಸ್, 263 ಒಬಿಸಿ, 154 ಎಸ್ಸಿ ಮತ್ತು 72 ಎಸ್ಟಿ ವರ್ಗದವರು. 178 ಅಭ್ಯರ್ಥಿಗಳ ಮೀಸಲು ಪಟ್ಟಿಯನ್ನೂ ಸಿದ್ಧಪಡಿಸಲಾಗಿದೆ. ಐಎಎಸ್ ಹುದ್ದೆಗಳ ಆಯ್ಕೆಗೆ 180 ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಲಾಗಿದೆ.
ಟಾಪ್ 10ರ ಸ್ಥಾನದಲ್ಲಿ ಇರುವ ಅಭ್ಯರ್ಥಿಗಳು
1. ಇಶಿತಾ ಕಿಶೋರ್
2. ಗರಿಮಾ ಲೋಹಿಯಾ
3. ಉಮಾ ಹಾರ್ತಿ ಎನ್
4. ಸ್ಮೃತಿ ಮಿಶ್ರಾ
5. ಮಯೂರ್ ಹಜಾರಿಕಾ
6. ಆಭರಣ ನವ್ಯಾ ಜೇಮ್ಸ್
7. ವಾಸಿಂ ಅಹ್ಮದ್ ಭಟ್
8. ಅನಿರುದ್ಧ್ ಯಾದವ್
9. ಕನಿಕಾ ಗೋಯಲ್
10. ರಾಹುಲ್ ಶ್ರೀವಾಸ್ತವ್
ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…
ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…