ದೇಶದ ಪ್ರತಿಷ್ಠಿತ ಹಾಗೂ ಕಠಿಣ ಪರೀಕ್ಷೆಗಳಲ್ಲಿ ಒಂದಾದ ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವಾ ಪರೀಕ್ಷೆಗಳ 2022ನೇ ಸಾಲಿನ ಫಲಿತಾಂಶ ಪ್ರಕಟವಾಗಿದ್ದು, ಆಶಿತಾ ಕಿಶೋರ್ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
ಈ ಬಾರಿ ಕರ್ನಾಟಕದ 25 ಮಂದಿ ಆಯ್ಕೆಯಾಗಿದ್ದು ಬಹಳ ಸಂತಸದ ಸಂಗತಿಯಾಗಿದೆ, ಕೋಟ್ಯಂತರ ಯುವಕ ಯುವತಿಯರ ಕನಸಾಗಿರುವ ಯುಪಿಎಸ್ಸಿ ಪರೀಕ್ಷೆಯಲ್ಲಿ ಪಾಸಗುವುದು ಎಂದರೆ ಅಷ್ಟು ಸುಲಭದ ಮಾತಲ್ಲ, ಅದರಲ್ಲೂ ಪಾಸಗಿರುವ ಎಲ್ಲಾ ಅಧಿಕಾರಿಗಳಿಗೆ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ.
ಐಎಎಸ್ 180, ಐಪಿಎಸ್ 200, ಐಎಫ್ಎಸ್ 38, ಗ್ರೂಪ್ ಎ 473, ಹಾಗೂ ಗ್ರೂಪ್ ಬಿ ಹುದ್ದೆಗೆ 131ಮಂದಿ ಆಯ್ಕೆಯಾಗಿದ್ದಾರೆ.
IAS ಪರೀಕ್ಷೆಯಲ್ಲಿ ಕಾಣಿಸಿಕೊಂಡ ಅಭ್ಯರ್ಥಿಗಳು UPSC ಯ ಅಧಿಕೃತ ವೆಬ್ಸೈಟ್ www.upsc.gov.in ನಲ್ಲಿ ಅಂತಿಮ ಫಲಿತಾಂಶವನ್ನು ಪರಿಶೀಲಿಸಬಹುದು.
ಪರೀಕ್ಷೆಯ ಅಂತಿಮ ಫಲಿತಾಂಶದಲ್ಲಿ ಒಟ್ಟು 933 ಅಭ್ಯರ್ಥಿಗಳು ನೇಮಕಾತಿಗೆ ಆಯ್ಕೆಯಾಗಿದ್ದಾರೆ. ಈ ಪೈಕಿ 345 ಅಭ್ಯರ್ಥಿಗಳು ಮೀಸಲಾತಿ ರಹಿತ, 99 ಇಡಬ್ಲ್ಯೂಎಸ್, 263 ಒಬಿಸಿ, 154 ಎಸ್ಸಿ ಮತ್ತು 72 ಎಸ್ಟಿ ವರ್ಗದವರು. 178 ಅಭ್ಯರ್ಥಿಗಳ ಮೀಸಲು ಪಟ್ಟಿಯನ್ನೂ ಸಿದ್ಧಪಡಿಸಲಾಗಿದೆ. ಐಎಎಸ್ ಹುದ್ದೆಗಳ ಆಯ್ಕೆಗೆ 180 ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಲಾಗಿದೆ.
ಟಾಪ್ 10ರ ಸ್ಥಾನದಲ್ಲಿ ಇರುವ ಅಭ್ಯರ್ಥಿಗಳು
1. ಇಶಿತಾ ಕಿಶೋರ್
2. ಗರಿಮಾ ಲೋಹಿಯಾ
3. ಉಮಾ ಹಾರ್ತಿ ಎನ್
4. ಸ್ಮೃತಿ ಮಿಶ್ರಾ
5. ಮಯೂರ್ ಹಜಾರಿಕಾ
6. ಆಭರಣ ನವ್ಯಾ ಜೇಮ್ಸ್
7. ವಾಸಿಂ ಅಹ್ಮದ್ ಭಟ್
8. ಅನಿರುದ್ಧ್ ಯಾದವ್
9. ಕನಿಕಾ ಗೋಯಲ್
10. ರಾಹುಲ್ ಶ್ರೀವಾಸ್ತವ್
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…