ದೇಶದ ಪ್ರತಿಷ್ಠಿತ ಹಾಗೂ ಕಠಿಣ ಪರೀಕ್ಷೆಗಳಲ್ಲಿ ಒಂದಾದ ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವಾ ಪರೀಕ್ಷೆಗಳ 2022ನೇ ಸಾಲಿನ ಫಲಿತಾಂಶ ಪ್ರಕಟವಾಗಿದ್ದು, ಆಶಿತಾ ಕಿಶೋರ್ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
ಈ ಬಾರಿ ಕರ್ನಾಟಕದ 25 ಮಂದಿ ಆಯ್ಕೆಯಾಗಿದ್ದು ಬಹಳ ಸಂತಸದ ಸಂಗತಿಯಾಗಿದೆ, ಕೋಟ್ಯಂತರ ಯುವಕ ಯುವತಿಯರ ಕನಸಾಗಿರುವ ಯುಪಿಎಸ್ಸಿ ಪರೀಕ್ಷೆಯಲ್ಲಿ ಪಾಸಗುವುದು ಎಂದರೆ ಅಷ್ಟು ಸುಲಭದ ಮಾತಲ್ಲ, ಅದರಲ್ಲೂ ಪಾಸಗಿರುವ ಎಲ್ಲಾ ಅಧಿಕಾರಿಗಳಿಗೆ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ.
ಐಎಎಸ್ 180, ಐಪಿಎಸ್ 200, ಐಎಫ್ಎಸ್ 38, ಗ್ರೂಪ್ ಎ 473, ಹಾಗೂ ಗ್ರೂಪ್ ಬಿ ಹುದ್ದೆಗೆ 131ಮಂದಿ ಆಯ್ಕೆಯಾಗಿದ್ದಾರೆ.
IAS ಪರೀಕ್ಷೆಯಲ್ಲಿ ಕಾಣಿಸಿಕೊಂಡ ಅಭ್ಯರ್ಥಿಗಳು UPSC ಯ ಅಧಿಕೃತ ವೆಬ್ಸೈಟ್ www.upsc.gov.in ನಲ್ಲಿ ಅಂತಿಮ ಫಲಿತಾಂಶವನ್ನು ಪರಿಶೀಲಿಸಬಹುದು.
ಪರೀಕ್ಷೆಯ ಅಂತಿಮ ಫಲಿತಾಂಶದಲ್ಲಿ ಒಟ್ಟು 933 ಅಭ್ಯರ್ಥಿಗಳು ನೇಮಕಾತಿಗೆ ಆಯ್ಕೆಯಾಗಿದ್ದಾರೆ. ಈ ಪೈಕಿ 345 ಅಭ್ಯರ್ಥಿಗಳು ಮೀಸಲಾತಿ ರಹಿತ, 99 ಇಡಬ್ಲ್ಯೂಎಸ್, 263 ಒಬಿಸಿ, 154 ಎಸ್ಸಿ ಮತ್ತು 72 ಎಸ್ಟಿ ವರ್ಗದವರು. 178 ಅಭ್ಯರ್ಥಿಗಳ ಮೀಸಲು ಪಟ್ಟಿಯನ್ನೂ ಸಿದ್ಧಪಡಿಸಲಾಗಿದೆ. ಐಎಎಸ್ ಹುದ್ದೆಗಳ ಆಯ್ಕೆಗೆ 180 ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಲಾಗಿದೆ.
ಟಾಪ್ 10ರ ಸ್ಥಾನದಲ್ಲಿ ಇರುವ ಅಭ್ಯರ್ಥಿಗಳು
1. ಇಶಿತಾ ಕಿಶೋರ್
2. ಗರಿಮಾ ಲೋಹಿಯಾ
3. ಉಮಾ ಹಾರ್ತಿ ಎನ್
4. ಸ್ಮೃತಿ ಮಿಶ್ರಾ
5. ಮಯೂರ್ ಹಜಾರಿಕಾ
6. ಆಭರಣ ನವ್ಯಾ ಜೇಮ್ಸ್
7. ವಾಸಿಂ ಅಹ್ಮದ್ ಭಟ್
8. ಅನಿರುದ್ಧ್ ಯಾದವ್
9. ಕನಿಕಾ ಗೋಯಲ್
10. ರಾಹುಲ್ ಶ್ರೀವಾಸ್ತವ್
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…