Categories: ಪರಿಸರ

(World Snakes Day) ಹಾವಿದ್ದರೆ ನಾವು…..

ಹಾವು ಎಂದರೆ ಮೊದಲು ಮನಸಿನಲ್ಲಿ ಹುಟ್ಟುವ ಭಾವನೆ ಭಯ ಮತ್ತು ಆತಂಕ. ಇಂತ ಭಯವನ್ನು ಹೋಗಲಾಡಿಸಿ ಹಾವುಗಳ ಬಗ್ಗೆ ಕಾಳಜಿ ಬೆಳೆಯುವಂತೆ ಅರಿವು ಮೂಡಿಸಲು ವಿಶ್ವ ಹಾವು ದಿನವನ್ನು ಆಚರಿಸಲಾಗುತ್ತದೆ.

ಹಾವುಗಳ ಬಗ್ಗೆ ಇರುವ ತಪ್ಪು ನಂಬಿಕೆಗಳನ್ನು ಮುರಿಯೋಣ. ಹಾವು ನಮಗೆ ಅರ್ಥವಾದಷ್ಟು ಹತ್ತಿರವಾಗುತ್ತದೆ. ಹಾಲು ಹಾವಿನ ಆಹಾರ ಅಲ್ಲ. ಹಾವು ದ್ವೇಷ ಸಾದಿಸುವುದಿಲ್ಲ. ಹಾವಿನ ದೇಹದಲ್ಲಿ ನಾಗಮಣಿ ಇಲ್ಲ. ಹಾವಿಗೆ ಕೂದಲು ಬೆಳೆಯುವುದಿಲ್ಲ. ಹಾವಿಗೆ ಹೊರ ಕಿವಿ ಇಲ್ಲದ ಕಾರಣ ಪುಂಗಿಯ ನಾದ ಅಥವ ಯಾವುದೆ ಶಬ್ದ ಕೇಳಿಸುವುದಿಲ್ಲ. ಹಾವು ಕಂಪನಗಳನ್ನಷ್ಟೇ ಗ್ರಹಿಸಬಲ್ಲದು. ಹಾವಿನ ಉಸಿರು, ಬಾಲ ತಾಗಿದರೆ ಏನೂ ಆಗುವುದಿಲ್ಲ. ಕೆಲವೊಮ್ಮೆ ರಸ್ತೆ ಹೊಲಗಳಲ್ಲಿ ಎರಡು ಹಾವುಗಳು ಸುತ್ತುವರಿದಿರುವುದು ಸಂಭೋಗವಲ್ಲ. ಅದು ಎರಡು ಗಂಡು ಹಾವುಗಳು ಹೆಣ್ಣಿಗಾಗಿ ನಡೆಸುವ ಜೀವಹಾನಿಯಾಗದ ಬಲಪ್ರದರ್ಶನ.

ಮನುಷ್ಯರಲ್ಲಿ ಸಯಾಮಿಯ ತೊಂದರೆಯಂತೆ ಹಾವಿನಲ್ಲಿ ಎರಡು ತಲೆ ಇರುವುದು ಒಂದು ಕಾಯಿಲೆ ಮತ್ತು ಅದು ಹೆಚ್ಚು ದಿನ ಬದುಕುವುದಿಲ್ಲ. ಬಲದ ಭಾಗದಲ್ಲಿ ತಲೆ ಇರುವುದಿಲ್ಲ. ಚಿತ್ರಗಳಲ್ಲಿ ನೋಡುವಂತೆ 3, 5, 7 ತಲೆ ಇರುವುದಿಲ್ಲ.

ಅನುಕೂಲಗಳು-

ಹವುಗಳು ಆಹಾರ ಸರಪಳಿಯ ಭಾಗ. ಹಾವು ರೈತ ಸ್ನೇಹಿ – ಇಲಿಗಳನ್ನು ಬಿಳದೊಳಗೆ ಹೊಕ್ಕು ಹಿಡಿಯುತ್ತದೆ. ಹಾವಿನ ಆಕಾರದಿಂದ ಪ್ರೆರೇಪಿತಗೊಂಡು ಸೃಷ್ಟಿಸಿರುವ ರೋಬೋಟ್ಗಳು ಭೂಕಂಪದ ವೇಳೆ ಬಿದ್ದ ಕಟ್ಟಡಗಳ ಒಳಗೆ ಸುಲಭವಾಗಿ ಹೋಗಿ ಮಾಹಿತಿ ನೀಡುತ್ತವೆ.

ಪರೋಕ್ಷವಾಗಿ ಬೀಜ ಪ್ರಸರಣವೂ ಮಾಡುತ್ತವೆ. ಹಾವಿನ ವಿಷದಿಂದ, ಹಾವು ಕಡಿತಕ್ಕೆ ಔಷಧಿ ಮತ್ತು ಹಲವಾರು ಕಾಯಿಲೆಗಳಿಗೆ ಔಷಧಿ ಕಂಡುಹಿಡಿಯಲಾಗಿದೆ ಹಾಗೂ ಇನ್ನೂ ಹಲವಾರು ಸಂಶೋಧನೆಗಳು ಮಾನವನ ಜೀವ ಉಳಿಸುವ ಔಷಧಿಗಳಿಗಾಗಿ ನಡೆಯುತ್ತಿದೆ ಎಂದು ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆಯ ಲೋಹಿತ್ ವೈ ಟಿ ತಿಳಿಸಿದ್ದಾರೆ.

Ramesh Babu

Journalist

Recent Posts

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

6 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

7 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

7 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

9 hours ago

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

20 hours ago