Categories: ಪರಿಸರ

(World Snakes Day) ಹಾವಿದ್ದರೆ ನಾವು…..

ಹಾವು ಎಂದರೆ ಮೊದಲು ಮನಸಿನಲ್ಲಿ ಹುಟ್ಟುವ ಭಾವನೆ ಭಯ ಮತ್ತು ಆತಂಕ. ಇಂತ ಭಯವನ್ನು ಹೋಗಲಾಡಿಸಿ ಹಾವುಗಳ ಬಗ್ಗೆ ಕಾಳಜಿ ಬೆಳೆಯುವಂತೆ ಅರಿವು ಮೂಡಿಸಲು ವಿಶ್ವ ಹಾವು ದಿನವನ್ನು ಆಚರಿಸಲಾಗುತ್ತದೆ.

ಹಾವುಗಳ ಬಗ್ಗೆ ಇರುವ ತಪ್ಪು ನಂಬಿಕೆಗಳನ್ನು ಮುರಿಯೋಣ. ಹಾವು ನಮಗೆ ಅರ್ಥವಾದಷ್ಟು ಹತ್ತಿರವಾಗುತ್ತದೆ. ಹಾಲು ಹಾವಿನ ಆಹಾರ ಅಲ್ಲ. ಹಾವು ದ್ವೇಷ ಸಾದಿಸುವುದಿಲ್ಲ. ಹಾವಿನ ದೇಹದಲ್ಲಿ ನಾಗಮಣಿ ಇಲ್ಲ. ಹಾವಿಗೆ ಕೂದಲು ಬೆಳೆಯುವುದಿಲ್ಲ. ಹಾವಿಗೆ ಹೊರ ಕಿವಿ ಇಲ್ಲದ ಕಾರಣ ಪುಂಗಿಯ ನಾದ ಅಥವ ಯಾವುದೆ ಶಬ್ದ ಕೇಳಿಸುವುದಿಲ್ಲ. ಹಾವು ಕಂಪನಗಳನ್ನಷ್ಟೇ ಗ್ರಹಿಸಬಲ್ಲದು. ಹಾವಿನ ಉಸಿರು, ಬಾಲ ತಾಗಿದರೆ ಏನೂ ಆಗುವುದಿಲ್ಲ. ಕೆಲವೊಮ್ಮೆ ರಸ್ತೆ ಹೊಲಗಳಲ್ಲಿ ಎರಡು ಹಾವುಗಳು ಸುತ್ತುವರಿದಿರುವುದು ಸಂಭೋಗವಲ್ಲ. ಅದು ಎರಡು ಗಂಡು ಹಾವುಗಳು ಹೆಣ್ಣಿಗಾಗಿ ನಡೆಸುವ ಜೀವಹಾನಿಯಾಗದ ಬಲಪ್ರದರ್ಶನ.

ಮನುಷ್ಯರಲ್ಲಿ ಸಯಾಮಿಯ ತೊಂದರೆಯಂತೆ ಹಾವಿನಲ್ಲಿ ಎರಡು ತಲೆ ಇರುವುದು ಒಂದು ಕಾಯಿಲೆ ಮತ್ತು ಅದು ಹೆಚ್ಚು ದಿನ ಬದುಕುವುದಿಲ್ಲ. ಬಲದ ಭಾಗದಲ್ಲಿ ತಲೆ ಇರುವುದಿಲ್ಲ. ಚಿತ್ರಗಳಲ್ಲಿ ನೋಡುವಂತೆ 3, 5, 7 ತಲೆ ಇರುವುದಿಲ್ಲ.

ಅನುಕೂಲಗಳು-

ಹವುಗಳು ಆಹಾರ ಸರಪಳಿಯ ಭಾಗ. ಹಾವು ರೈತ ಸ್ನೇಹಿ – ಇಲಿಗಳನ್ನು ಬಿಳದೊಳಗೆ ಹೊಕ್ಕು ಹಿಡಿಯುತ್ತದೆ. ಹಾವಿನ ಆಕಾರದಿಂದ ಪ್ರೆರೇಪಿತಗೊಂಡು ಸೃಷ್ಟಿಸಿರುವ ರೋಬೋಟ್ಗಳು ಭೂಕಂಪದ ವೇಳೆ ಬಿದ್ದ ಕಟ್ಟಡಗಳ ಒಳಗೆ ಸುಲಭವಾಗಿ ಹೋಗಿ ಮಾಹಿತಿ ನೀಡುತ್ತವೆ.

ಪರೋಕ್ಷವಾಗಿ ಬೀಜ ಪ್ರಸರಣವೂ ಮಾಡುತ್ತವೆ. ಹಾವಿನ ವಿಷದಿಂದ, ಹಾವು ಕಡಿತಕ್ಕೆ ಔಷಧಿ ಮತ್ತು ಹಲವಾರು ಕಾಯಿಲೆಗಳಿಗೆ ಔಷಧಿ ಕಂಡುಹಿಡಿಯಲಾಗಿದೆ ಹಾಗೂ ಇನ್ನೂ ಹಲವಾರು ಸಂಶೋಧನೆಗಳು ಮಾನವನ ಜೀವ ಉಳಿಸುವ ಔಷಧಿಗಳಿಗಾಗಿ ನಡೆಯುತ್ತಿದೆ ಎಂದು ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆಯ ಲೋಹಿತ್ ವೈ ಟಿ ತಿಳಿಸಿದ್ದಾರೆ.

Ramesh Babu

Journalist

Recent Posts

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

6 hours ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

15 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

1 day ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

1 day ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

2 days ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

2 days ago