Categories: ಪರಿಸರ

(World Snakes Day) ಹಾವಿದ್ದರೆ ನಾವು…..

ಹಾವು ಎಂದರೆ ಮೊದಲು ಮನಸಿನಲ್ಲಿ ಹುಟ್ಟುವ ಭಾವನೆ ಭಯ ಮತ್ತು ಆತಂಕ. ಇಂತ ಭಯವನ್ನು ಹೋಗಲಾಡಿಸಿ ಹಾವುಗಳ ಬಗ್ಗೆ ಕಾಳಜಿ ಬೆಳೆಯುವಂತೆ ಅರಿವು ಮೂಡಿಸಲು ವಿಶ್ವ ಹಾವು ದಿನವನ್ನು ಆಚರಿಸಲಾಗುತ್ತದೆ.

ಹಾವುಗಳ ಬಗ್ಗೆ ಇರುವ ತಪ್ಪು ನಂಬಿಕೆಗಳನ್ನು ಮುರಿಯೋಣ. ಹಾವು ನಮಗೆ ಅರ್ಥವಾದಷ್ಟು ಹತ್ತಿರವಾಗುತ್ತದೆ. ಹಾಲು ಹಾವಿನ ಆಹಾರ ಅಲ್ಲ. ಹಾವು ದ್ವೇಷ ಸಾದಿಸುವುದಿಲ್ಲ. ಹಾವಿನ ದೇಹದಲ್ಲಿ ನಾಗಮಣಿ ಇಲ್ಲ. ಹಾವಿಗೆ ಕೂದಲು ಬೆಳೆಯುವುದಿಲ್ಲ. ಹಾವಿಗೆ ಹೊರ ಕಿವಿ ಇಲ್ಲದ ಕಾರಣ ಪುಂಗಿಯ ನಾದ ಅಥವ ಯಾವುದೆ ಶಬ್ದ ಕೇಳಿಸುವುದಿಲ್ಲ. ಹಾವು ಕಂಪನಗಳನ್ನಷ್ಟೇ ಗ್ರಹಿಸಬಲ್ಲದು. ಹಾವಿನ ಉಸಿರು, ಬಾಲ ತಾಗಿದರೆ ಏನೂ ಆಗುವುದಿಲ್ಲ. ಕೆಲವೊಮ್ಮೆ ರಸ್ತೆ ಹೊಲಗಳಲ್ಲಿ ಎರಡು ಹಾವುಗಳು ಸುತ್ತುವರಿದಿರುವುದು ಸಂಭೋಗವಲ್ಲ. ಅದು ಎರಡು ಗಂಡು ಹಾವುಗಳು ಹೆಣ್ಣಿಗಾಗಿ ನಡೆಸುವ ಜೀವಹಾನಿಯಾಗದ ಬಲಪ್ರದರ್ಶನ.

ಮನುಷ್ಯರಲ್ಲಿ ಸಯಾಮಿಯ ತೊಂದರೆಯಂತೆ ಹಾವಿನಲ್ಲಿ ಎರಡು ತಲೆ ಇರುವುದು ಒಂದು ಕಾಯಿಲೆ ಮತ್ತು ಅದು ಹೆಚ್ಚು ದಿನ ಬದುಕುವುದಿಲ್ಲ. ಬಲದ ಭಾಗದಲ್ಲಿ ತಲೆ ಇರುವುದಿಲ್ಲ. ಚಿತ್ರಗಳಲ್ಲಿ ನೋಡುವಂತೆ 3, 5, 7 ತಲೆ ಇರುವುದಿಲ್ಲ.

ಅನುಕೂಲಗಳು-

ಹವುಗಳು ಆಹಾರ ಸರಪಳಿಯ ಭಾಗ. ಹಾವು ರೈತ ಸ್ನೇಹಿ – ಇಲಿಗಳನ್ನು ಬಿಳದೊಳಗೆ ಹೊಕ್ಕು ಹಿಡಿಯುತ್ತದೆ. ಹಾವಿನ ಆಕಾರದಿಂದ ಪ್ರೆರೇಪಿತಗೊಂಡು ಸೃಷ್ಟಿಸಿರುವ ರೋಬೋಟ್ಗಳು ಭೂಕಂಪದ ವೇಳೆ ಬಿದ್ದ ಕಟ್ಟಡಗಳ ಒಳಗೆ ಸುಲಭವಾಗಿ ಹೋಗಿ ಮಾಹಿತಿ ನೀಡುತ್ತವೆ.

ಪರೋಕ್ಷವಾಗಿ ಬೀಜ ಪ್ರಸರಣವೂ ಮಾಡುತ್ತವೆ. ಹಾವಿನ ವಿಷದಿಂದ, ಹಾವು ಕಡಿತಕ್ಕೆ ಔಷಧಿ ಮತ್ತು ಹಲವಾರು ಕಾಯಿಲೆಗಳಿಗೆ ಔಷಧಿ ಕಂಡುಹಿಡಿಯಲಾಗಿದೆ ಹಾಗೂ ಇನ್ನೂ ಹಲವಾರು ಸಂಶೋಧನೆಗಳು ಮಾನವನ ಜೀವ ಉಳಿಸುವ ಔಷಧಿಗಳಿಗಾಗಿ ನಡೆಯುತ್ತಿದೆ ಎಂದು ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆಯ ಲೋಹಿತ್ ವೈ ಟಿ ತಿಳಿಸಿದ್ದಾರೆ.

Ramesh Babu

Journalist

Recent Posts

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

2 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

3 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

7 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

11 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

13 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

13 hours ago