Categories: ಪರಿಸರ

(World Snakes Day) ಹಾವಿದ್ದರೆ ನಾವು…..

ಹಾವು ಎಂದರೆ ಮೊದಲು ಮನಸಿನಲ್ಲಿ ಹುಟ್ಟುವ ಭಾವನೆ ಭಯ ಮತ್ತು ಆತಂಕ. ಇಂತ ಭಯವನ್ನು ಹೋಗಲಾಡಿಸಿ ಹಾವುಗಳ ಬಗ್ಗೆ ಕಾಳಜಿ ಬೆಳೆಯುವಂತೆ ಅರಿವು ಮೂಡಿಸಲು ವಿಶ್ವ ಹಾವು ದಿನವನ್ನು ಆಚರಿಸಲಾಗುತ್ತದೆ.

ಹಾವುಗಳ ಬಗ್ಗೆ ಇರುವ ತಪ್ಪು ನಂಬಿಕೆಗಳನ್ನು ಮುರಿಯೋಣ. ಹಾವು ನಮಗೆ ಅರ್ಥವಾದಷ್ಟು ಹತ್ತಿರವಾಗುತ್ತದೆ. ಹಾಲು ಹಾವಿನ ಆಹಾರ ಅಲ್ಲ. ಹಾವು ದ್ವೇಷ ಸಾದಿಸುವುದಿಲ್ಲ. ಹಾವಿನ ದೇಹದಲ್ಲಿ ನಾಗಮಣಿ ಇಲ್ಲ. ಹಾವಿಗೆ ಕೂದಲು ಬೆಳೆಯುವುದಿಲ್ಲ. ಹಾವಿಗೆ ಹೊರ ಕಿವಿ ಇಲ್ಲದ ಕಾರಣ ಪುಂಗಿಯ ನಾದ ಅಥವ ಯಾವುದೆ ಶಬ್ದ ಕೇಳಿಸುವುದಿಲ್ಲ. ಹಾವು ಕಂಪನಗಳನ್ನಷ್ಟೇ ಗ್ರಹಿಸಬಲ್ಲದು. ಹಾವಿನ ಉಸಿರು, ಬಾಲ ತಾಗಿದರೆ ಏನೂ ಆಗುವುದಿಲ್ಲ. ಕೆಲವೊಮ್ಮೆ ರಸ್ತೆ ಹೊಲಗಳಲ್ಲಿ ಎರಡು ಹಾವುಗಳು ಸುತ್ತುವರಿದಿರುವುದು ಸಂಭೋಗವಲ್ಲ. ಅದು ಎರಡು ಗಂಡು ಹಾವುಗಳು ಹೆಣ್ಣಿಗಾಗಿ ನಡೆಸುವ ಜೀವಹಾನಿಯಾಗದ ಬಲಪ್ರದರ್ಶನ.

ಮನುಷ್ಯರಲ್ಲಿ ಸಯಾಮಿಯ ತೊಂದರೆಯಂತೆ ಹಾವಿನಲ್ಲಿ ಎರಡು ತಲೆ ಇರುವುದು ಒಂದು ಕಾಯಿಲೆ ಮತ್ತು ಅದು ಹೆಚ್ಚು ದಿನ ಬದುಕುವುದಿಲ್ಲ. ಬಲದ ಭಾಗದಲ್ಲಿ ತಲೆ ಇರುವುದಿಲ್ಲ. ಚಿತ್ರಗಳಲ್ಲಿ ನೋಡುವಂತೆ 3, 5, 7 ತಲೆ ಇರುವುದಿಲ್ಲ.

ಅನುಕೂಲಗಳು-

ಹವುಗಳು ಆಹಾರ ಸರಪಳಿಯ ಭಾಗ. ಹಾವು ರೈತ ಸ್ನೇಹಿ – ಇಲಿಗಳನ್ನು ಬಿಳದೊಳಗೆ ಹೊಕ್ಕು ಹಿಡಿಯುತ್ತದೆ. ಹಾವಿನ ಆಕಾರದಿಂದ ಪ್ರೆರೇಪಿತಗೊಂಡು ಸೃಷ್ಟಿಸಿರುವ ರೋಬೋಟ್ಗಳು ಭೂಕಂಪದ ವೇಳೆ ಬಿದ್ದ ಕಟ್ಟಡಗಳ ಒಳಗೆ ಸುಲಭವಾಗಿ ಹೋಗಿ ಮಾಹಿತಿ ನೀಡುತ್ತವೆ.

ಪರೋಕ್ಷವಾಗಿ ಬೀಜ ಪ್ರಸರಣವೂ ಮಾಡುತ್ತವೆ. ಹಾವಿನ ವಿಷದಿಂದ, ಹಾವು ಕಡಿತಕ್ಕೆ ಔಷಧಿ ಮತ್ತು ಹಲವಾರು ಕಾಯಿಲೆಗಳಿಗೆ ಔಷಧಿ ಕಂಡುಹಿಡಿಯಲಾಗಿದೆ ಹಾಗೂ ಇನ್ನೂ ಹಲವಾರು ಸಂಶೋಧನೆಗಳು ಮಾನವನ ಜೀವ ಉಳಿಸುವ ಔಷಧಿಗಳಿಗಾಗಿ ನಡೆಯುತ್ತಿದೆ ಎಂದು ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆಯ ಲೋಹಿತ್ ವೈ ಟಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

4 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

5 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

6 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

7 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

14 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago