Categories: ಪರಿಸರ

(World Snakes Day) ಹಾವಿದ್ದರೆ ನಾವು…..

ಹಾವು ಎಂದರೆ ಮೊದಲು ಮನಸಿನಲ್ಲಿ ಹುಟ್ಟುವ ಭಾವನೆ ಭಯ ಮತ್ತು ಆತಂಕ. ಇಂತ ಭಯವನ್ನು ಹೋಗಲಾಡಿಸಿ ಹಾವುಗಳ ಬಗ್ಗೆ ಕಾಳಜಿ ಬೆಳೆಯುವಂತೆ ಅರಿವು ಮೂಡಿಸಲು ವಿಶ್ವ ಹಾವು ದಿನವನ್ನು ಆಚರಿಸಲಾಗುತ್ತದೆ.

ಹಾವುಗಳ ಬಗ್ಗೆ ಇರುವ ತಪ್ಪು ನಂಬಿಕೆಗಳನ್ನು ಮುರಿಯೋಣ. ಹಾವು ನಮಗೆ ಅರ್ಥವಾದಷ್ಟು ಹತ್ತಿರವಾಗುತ್ತದೆ. ಹಾಲು ಹಾವಿನ ಆಹಾರ ಅಲ್ಲ. ಹಾವು ದ್ವೇಷ ಸಾದಿಸುವುದಿಲ್ಲ. ಹಾವಿನ ದೇಹದಲ್ಲಿ ನಾಗಮಣಿ ಇಲ್ಲ. ಹಾವಿಗೆ ಕೂದಲು ಬೆಳೆಯುವುದಿಲ್ಲ. ಹಾವಿಗೆ ಹೊರ ಕಿವಿ ಇಲ್ಲದ ಕಾರಣ ಪುಂಗಿಯ ನಾದ ಅಥವ ಯಾವುದೆ ಶಬ್ದ ಕೇಳಿಸುವುದಿಲ್ಲ. ಹಾವು ಕಂಪನಗಳನ್ನಷ್ಟೇ ಗ್ರಹಿಸಬಲ್ಲದು. ಹಾವಿನ ಉಸಿರು, ಬಾಲ ತಾಗಿದರೆ ಏನೂ ಆಗುವುದಿಲ್ಲ. ಕೆಲವೊಮ್ಮೆ ರಸ್ತೆ ಹೊಲಗಳಲ್ಲಿ ಎರಡು ಹಾವುಗಳು ಸುತ್ತುವರಿದಿರುವುದು ಸಂಭೋಗವಲ್ಲ. ಅದು ಎರಡು ಗಂಡು ಹಾವುಗಳು ಹೆಣ್ಣಿಗಾಗಿ ನಡೆಸುವ ಜೀವಹಾನಿಯಾಗದ ಬಲಪ್ರದರ್ಶನ.

ಮನುಷ್ಯರಲ್ಲಿ ಸಯಾಮಿಯ ತೊಂದರೆಯಂತೆ ಹಾವಿನಲ್ಲಿ ಎರಡು ತಲೆ ಇರುವುದು ಒಂದು ಕಾಯಿಲೆ ಮತ್ತು ಅದು ಹೆಚ್ಚು ದಿನ ಬದುಕುವುದಿಲ್ಲ. ಬಲದ ಭಾಗದಲ್ಲಿ ತಲೆ ಇರುವುದಿಲ್ಲ. ಚಿತ್ರಗಳಲ್ಲಿ ನೋಡುವಂತೆ 3, 5, 7 ತಲೆ ಇರುವುದಿಲ್ಲ.

ಅನುಕೂಲಗಳು-

ಹವುಗಳು ಆಹಾರ ಸರಪಳಿಯ ಭಾಗ. ಹಾವು ರೈತ ಸ್ನೇಹಿ – ಇಲಿಗಳನ್ನು ಬಿಳದೊಳಗೆ ಹೊಕ್ಕು ಹಿಡಿಯುತ್ತದೆ. ಹಾವಿನ ಆಕಾರದಿಂದ ಪ್ರೆರೇಪಿತಗೊಂಡು ಸೃಷ್ಟಿಸಿರುವ ರೋಬೋಟ್ಗಳು ಭೂಕಂಪದ ವೇಳೆ ಬಿದ್ದ ಕಟ್ಟಡಗಳ ಒಳಗೆ ಸುಲಭವಾಗಿ ಹೋಗಿ ಮಾಹಿತಿ ನೀಡುತ್ತವೆ.

ಪರೋಕ್ಷವಾಗಿ ಬೀಜ ಪ್ರಸರಣವೂ ಮಾಡುತ್ತವೆ. ಹಾವಿನ ವಿಷದಿಂದ, ಹಾವು ಕಡಿತಕ್ಕೆ ಔಷಧಿ ಮತ್ತು ಹಲವಾರು ಕಾಯಿಲೆಗಳಿಗೆ ಔಷಧಿ ಕಂಡುಹಿಡಿಯಲಾಗಿದೆ ಹಾಗೂ ಇನ್ನೂ ಹಲವಾರು ಸಂಶೋಧನೆಗಳು ಮಾನವನ ಜೀವ ಉಳಿಸುವ ಔಷಧಿಗಳಿಗಾಗಿ ನಡೆಯುತ್ತಿದೆ ಎಂದು ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆಯ ಲೋಹಿತ್ ವೈ ಟಿ ತಿಳಿಸಿದ್ದಾರೆ.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

9 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

18 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

19 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago